ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ :ಪಾಂಡವಪುರ ರಾಷ್ಟ್ರೀಯ ಸ್ವಯಂಸೇವಕ ಸಂಘ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಸಂಘದ ಸ್ವಯಂ ಸೇವಕರ ಜೊತೆ ಅನುಚಿತವಾಗಿ ವರ್ತಿಸಿರುವ ಡಿವೈಎಸ್ಪಿಯನ್ನು ಕೂಡಲೇ ಅಮಾನತು ಮಾಡಬೇಕು ಹಾಗೂ ಈ ಘಟನೆ ಕುರಿತು ತನಿಖಾ ಸಮಿತಿ ರಚಿಸಿ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆಗ್ರಹಿಸಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾಂಡವಪುರ ಆರ್ಎಸ್ಎಸ್ ಕಚೇರಿಗೆ ಪೊಲೀಸ್ ಪ್ರವೇಶ ಪ್ರಕರಣ ಖಂಡನೀಯವಾಗಿದೆ. ರಾಜ್ಯದಲ್ಲಿ ಅರಾಜಕತೆ ನೆಲೆಸಿದೆ. ತುಷ್ಟೀಕರಣದ ಪರಾಕಾಷ್ಠೆ ನಡೆಯುತ್ತಿದೆ. ಪಾಂಡವಪುರ ಆರ್ಎಸ್ಎಸ್ ಕಚೇರಿಗೆ ಪೊಲೀಸ್ ಅಧಿಕಾರಿ ಪ್ರವೇಶ ಮಾಡಿದ್ದಾರೆ ಸರ್ಚ್ ವಾರಂಟ್ ಇಲ್ಲದೇ ಬಂದಿದ್ದಾರೆ. ಸರ್ಚ್ ವಾರಂಟ್ ಇಲ್ಲದಿದ್ದರೂ ಸ್ಟೇಷನ್ ಡೈರಿಯಲ್ಲಿ ಸೂಕ್ತ ಕಾರಣದ ಬಗ್ಗೆ ಬರೆದು ಬರಬೇಕು. ಆದರೆ, ಪಾಂಡವರಪುರ ಆರ್ಎಸ್ಎಸ್ ಕಚೇರಿಗೆ ಪೊಲೀಸರು ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ದೂರಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್