ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ ಲೆಫ್ಟಿನೆಂಟ್ ಗವರ್ನರ್ ಭೇಟಿಗೆ ನಾಳೆ ಸಮಯ ಕೇಳಿದ್ದಾರೆ. ಅವರು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.
ಮುಂಬರುವ ಚುನಾವಣೆಯಲ್ಲಿ ಜನತೆ ತಾವು ಪ್ರಾಮಾಣಿಕರು ಎಂದು ತೀರ್ಪು ನೀಡಿದರೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೇಜ್ರೀವಾಲ ರಾಜೀನಾಮೆ ನಂತರ ಪಕ್ಷದ ಶಾಸಕರು ನೂತನ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಮೂಲಗಳು ತಿಳಿಸಿವೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa