ಕರ್ನಾಟಕ ರಣಜಿ ತಂಡದ ಸಂಭವನೀಯರ ಪಟ್ಟಿಯಲ್ಲಿ ಸಮಿತ್‌ ದ್ರಾವಿಡ್​​ಗೆ ಸ್ಥಾನ
ನವದೆಹಲಿ, 18 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. 37 ಸದಸ್ಯರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರ ಸುಪುತ್ರ ಸಮಿತ್ ದ್ರಾವಿಡ್ ಕೂಡ ಕಾಣಿಸಿಕ
Rahul Dravid Son Samit Dravid Named Karnataka R


ನವದೆಹಲಿ, 18 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. 37 ಸದಸ್ಯರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರ ಸುಪುತ್ರ ಸಮಿತ್ ದ್ರಾವಿಡ್ ಕೂಡ ಕಾಣಿಸಿಕೊಂಡಿರುವುದು ವಿಶೇಷ. ಇನ್ನು ಕೃಷ್ಣಪ್ಪ ಗೌತಮ್, ರೋನಿತ್ ಮೋರೆ ಸೇರಿದಂತೆ ಕೆಲ ಅನುಭವಿ ಆಟಗಾರರು ರಣಜಿ ತಂಡದ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಹಾಗೆಯೇ ಈ ಪಟ್ಟಿಯಲ್ಲಿ ಮಯಾಂಕ್ ಅಗರ್ವಾಲ್, ಮನೀಶ್ ಪಾಂಡೆ, ಕೆಎಲ್ ರಾಹುಲ್, ಪ್ರಸಿದ್ಧ್ ಕೃಷ್ಣ, ವೈಶಾಖ್ ವಿಜಯಕುಮಾರ್, ಶ್ರೇಯಸ್ ಗೋಪಾಲ್ ಸೇರಿದಂತೆ ಹಲವು ಅನುಭವಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಬಿಸಿಸಿಐ ವಯೋಮಿತಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸಮಿತ್ ದ್ರಾವಿಡ್, ಸಮರ್ಥ್ ನಾಗರಾಜ್, ಸ್ಮರಣ್ ಆರ್, ಕೃತಿಕ್ ಕೃಷ್ಣ, ಜಾಸ್ಪರ್ ಇ.ಜೆ ಸೇರಿದಂತೆ ಹಲವು ಯುವ ಆಟಗಾರರಿಗೆ ಈ ಬಾರಿ ಮಣೆ ಹಾಕಲಾಗಿದೆ.

ಇನ್ನು ಸಂಭವನೀಯ ತಂಡದಲ್ಲಿ ವಿಕೆಟ್​ ಕೀಪರ್​ಗಳಾಗಿ ನಾಲ್ವರು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಲವ್​ನೀತ್ ಸಿಸೋಡಿಯಾ, ಶ್ರೀಜಿತ್ ಕೆಎಲ್, ಸುಜಯ್ ಎಸ್ ಹಾಗೂ ಕೃತಿಕ್ ಕೃಷ್ಣ. ಈ ನಾಲ್ವರಲ್ಲಿ ಇಬ್ಬರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಬಹುದು.

15 ಆಟಗಾರರಿಗೆ ಚಾನ್ಸ್:

ಸಂಭವನೀಯ ತಂಡದಲ್ಲಿ ಒಟ್ಟು 37 ಆಟಗಾರರ ಹೆಸರಿದ್ದರೂ, ಇವರಲ್ಲಿ ಕೇವಲ 15 ಆಟಗಾರರು ಮಾತ್ರ ರಣಜಿ ಟೂರ್ನಿಗೆ ಆಯ್ಕೆಯಾಗಲಿದ್ದಾರೆ. ಈ ಬಾರಿ ಕಿರಿಯ ಆಟಗಾರರಿಗೆ ಹೆಚ್ಚಿನ ಮಣೆ ಹಾಕಿರುವುದರಿಂದ ಅನುಭವಿ ಹಾಗೂ ಯುವ ಆಟಗಾರರನ್ನು ಒಳಗೊಂಡ ಕರ್ನಾಟಕ ತಂಡವನ್ನು ನಿರೀಕ್ಷಿಸಬಹುದು. ಅದರಂತೆ ಈ ಬಾರಿ ಕರ್ನಾಟಕ ಪರ ರಣಜಿ ಆಡಲಿರುವ ಆಟಗಾರರು ಯಾರೆಂಬುದು ಶೀಘ್ರದಲ್ಲೇ ಗೊತ್ತಾಗಲಿದೆ.

ಸಂಭವನೀಯ ಆಟಗಾರರಿಗೆ ಮಣೆ:

ರಣಜಿ ಟೂರ್ನಿಗೆ 15 ಸದಸ್ಯರು ಆಯ್ಕೆಯಾದರೂ, ಸಂಭವನೀಯ ಆಟಗಾರರ ಪಟ್ಟಿಯಿಂದ ಕೆಲ ಆಟಗಾರರಿಗೆ ಮತ್ತೆ ಅವಕಾಶ ಸಿಗಬಹುದು. ಅಂದರೆ ಟೂರ್ನಿಯ ವೇಳೆ ಯಾವುದಾದರು ಆಟಗಾರರು ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ಸಂಭವನೀಯ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಆಟಗಾರರನ್ನೇ ಬದಲಿಯಾಗಿ ಆಯ್ಕೆ ಮಾಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande