ಸಿದ್ದರಾಮಯ್ಯಗೆ ನಟ ದುನಿಯಾ ವಿಜಯ್ ಧನ್ಯವಾದ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸೆಪ್ಟೆಂಬರ್ 18ರಂದು ವಿಶೇಷ ಸಭೆ ಏರ್ಪಡಿಸಿ ಹಾಗೂ ಸುದ್ದಿಗೋಷ್ಠಿ ನಡೆಸಿ ಮಾದಕ ವಸ್ತುಗಳ ನಿರ್ಮೂಲನೆಗೆ ಕಾರ್ಯಪಡೆ ಮಾಡುವ ಘೋಷಣೆ ಮಾಡಿದ್ದಾರೆ. ಈ ವ
Duniya Vijay Convey Thanks to CM Siddaramaiah


ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸೆಪ್ಟೆಂಬರ್ 18ರಂದು ವಿಶೇಷ ಸಭೆ ಏರ್ಪಡಿಸಿ ಹಾಗೂ ಸುದ್ದಿಗೋಷ್ಠಿ ನಡೆಸಿ ಮಾದಕ ವಸ್ತುಗಳ ನಿರ್ಮೂಲನೆಗೆ ಕಾರ್ಯಪಡೆ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.

ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ನಲ್ಲಿ ‘ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ನಿರ್ಮೂಲನೆಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆದಿದೆ. ಮಾದಕ ವಸ್ತುಗಳ ನಿರ್ಮೂಲನೆಗೆ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನನ್ನ ಧನ್ಯವಾದ’ ಎಂದಿದ್ದಾರೆ ದುನಿಯಾ ವಿಜಯ್.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande