ಕನ್ನಡ ಚಿತ್ರರಂಗದಲ್ಲಿ ಮತ್ತೆ ಮೀಟೂ ಬಿರುಗಾಳಿ? ತನಿಖೆಗೆ 153 ಮಂದಿ ಒತ್ತಾಯ
ಬೆಂಗಳೂರು, 04ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೆಲವು ವರ್ಷಗಳ ಹಿಂದೆ ಸುದ್ದಿ ಆಗಿದ್ದ ಮೀಟೂ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಬೇರೆ ಬೇರೆ ಭಾಷೆಯ ಚಿತ್ರರಂಗದ ಹಲವು ನಟಿಯರು ತಮಗೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಕೇರಳದ ‘ಹೇಮಾ
Kannada Film Industry celebrities want State


ಬೆಂಗಳೂರು, 04ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೆಲವು ವರ್ಷಗಳ ಹಿಂದೆ ಸುದ್ದಿ ಆಗಿದ್ದ ಮೀಟೂ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಬೇರೆ ಬೇರೆ ಭಾಷೆಯ ಚಿತ್ರರಂಗದ ಹಲವು ನಟಿಯರು ತಮಗೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಕೇರಳದ ‘ಹೇಮಾ ಸಮಿತಿ ವರದಿ’. , ಹೇಮಾ ಸಮಿತಿ ವರದಿ ​ ಪ್ರಕಟ ಆದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿ ಬಂದಿದೆ. ಹಕ್ಕು ಮತ್ತು ಸಮಾನತೆಗಾಗಿ ಚಲನಚಿತ್ರ ಉದ್ಯಮದ ಫೈರ್​ ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ನಟರು, ನಟಿಯರು, ಸಾಹಿತಿಗಳು, ಪತ್ರಕರ್ತರು, ನಿರ್ದೇಶಕರು, ನಿರ್ಮಾಪಕರು ಹಾಗೂ ವಿವಿಧ ವಿಭಾಗಗಳ ತಂತ್ರಜ್ಞರು ಸೇರಿದಂತೆ ಒಟ್ಟು 153 ಜನರು ಸಹಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ಹಿಂಸೆಯ ಸಮಸ್ಯೆಗಳೂ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಫೈರ್​ ಸಂಸ್ಥೆ ಮನವಿ ಮಾಡಿದೆ.

ವರದಿಯನ್ನು 3 ತಿಂಗಳ ಒಳಗೆ ಪೂರ್ಣಗೊಳಿಸಬೇಕು ಮತ್ತು ವರದಿಯ ವಿವರನ್ನು ಶೀಘ್ರವೇ ಸಾರ್ವಜನಿಕಗೊಳಿಸಬೇಕು ಎಂದು ಫೈರ್​ ಸಂಸ್ಥೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಮಲಯಾಳಂ ಚಿತ್ರರಂಗದ ರೀತಿಯೇ ಕನ್ನಡ ಚಿತ್ರರಂಗದಲ್ಲೂ ಒಂದು ವೇಳೆ ತನಿಖೆ ನಡೆದು ವರದಿ ಪ್ರಕಟವಾದರೆ ಒಂದಷ್ಟು ಮಂದಿಯ ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande