ಬೆಂಗಳೂರು, 05 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ನಟದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಚಿತ್ರಗಳು ಇದೀಗಾ ಲಭ್ಯವಾಗಿದೆ.
ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋ ಮಾತ್ರವಲ್ಲದೆ ಅವರು ಶವವಾಗಿ ಬಿದ್ದ ಫೋಟೋಗಳು ಸಿಕ್ಕಿವೆ. ಆರೋಪಿಗಳ ಮೊಬೈಲ್ನಲ್ಲಿ ಇದನ್ನು ಸೆರೆಹಿಡಿದುಕೊಳ್ಳಲಾಗಿತ್ತು. ಆ ಬಳಿಕ ಇದನ್ನು ಡಿಲೀಟ್ ಮಾಡಿದ್ದರು. ಈಗ ಈ ಚಿತ್ರಗಳನ್ನು ರಿಟ್ರೀವ್ ಮಾಡಲಾಗಿದೆ. ಚಾರ್ಜ್ಶೀಟ್ನಲ್ಲಿ ಈ ಫೋಟೋಗಳನ್ನು ಲಗತ್ತಿಸಲಾಗಿದೆ. ಇದು ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಆಗುವ ಸಾಧ್ಯತೆ ಇದೆ. ಚಾರ್ಜ್ಶೀಟ್ ಸಲ್ಲಿಕೆ ಬೆನ್ನಲ್ಲೇ ರೇಣುಕಾ ಸ್ವಾಮಿ ಅವರು ಕೈಮುಗಿದು ಅಂಗಲಾಚುತ್ತಿರುವ ಚಿತ್ರಗಳು ವೈರಲ್ ಆಗಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್