ರಾಂಚಿ, 07 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ಜಾರ್ಖಂಡ್ ಸರ್ಕಾರ ರಾಜ್ಯದ ವಕೀಲರಿಗೆ ೫ ಲಕ್ಷ ರೂಪಾಯಿ ವೈದ್ಯಕೀಯ ವಿಮೆ ಕಲ್ಪಿಸಲು ನಿರ್ಧರಿಸಿದೆ. ಇದರಿಂದ ರಾಜ್ಯದ ಸುಮಾರು ೩೦ ಸಾವಿರ ವಕೀಲರಿಗೆ ಪ್ರಯೋಜನವಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗಿದೆ. ೬೫ ವರ್ಷ ಮೀರಿದ ವಕೀಲರಿಗೆ ಕಲ್ಪಿಸಲಾಗುವ ಪಿಂಚಣಿಯನ್ನು ಸಹ ತಿಂಗಳಿಗೆ ೭ ಸಾವಿರ ರೂಪಾಯಿಗಳಿಂದ ೧೪ ಸಾವಿರ ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.
ಹೊಸದಾಗಿ ನೋಂದಾಯಿತ ವಕೀಲರಿಗೆ ಪ್ರತಿ ತಿಂಗಳು ೫ ಸಾವಿರ ರೂಪಾಯಿ ಸ್ಟೈಫಂಡ್ ನೀಡುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. ವಕೀಲರ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸುತ್ತಿರುವ ಏಕೈಕ ರಾಜ್ಯ ಜಾರ್ಖಂಡ್ ಆಗಿದ್ದು, ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂದು ಅಡ್ವೊಕೇಟ್ ಜನರಲ್ ರಾಜೀವ್ ರಂಜನ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್