ಮಳೆಯಿಂದ ನಷ್ಟಗೊಂಡ ಸಮಸ್ತ ರೈತರಿಗೆ ಪರಿಹಾರ ನೀಡುವಂತೆ ಆಗ್ರಹ
ವಿಜಯಪುರ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ೨೦೨೫-೨೬ ನೇ ಸಾಲಿನ ಜೂನ ತಿಂಗಳಿನಿಂದ ಇಲ್ಲಿಯವರೆಗೆ ಸುರಿದಿರುವ ಮಳೆಯಿಂದಾಗಿ ಇಡೀ ಜಿಲ್ಲೆಯಲ್ಲಿ ಸಾಕಷ್ಟು ರೈತರ ಬೆಳೆಗಳು ಸಂಪೂರ್ಣ ನಷ್ಟಗೊಂಡಿವೆ ಜೊತೆಗೆ ವಿಜಯಪುರ ಜಿಲ್ಲೆಯ ಭೀಮಾ, ಕೃಷ್ಣಾ ಹಾಗೂ ಡೋಣಿ ನದಿಯ ಪ್ರವಾಹದಿಂದಾಗಿಯೂ ಸಾಕಷ್ಟು ಬೆಳೆ ನಷ್ಟ
ಮಳೆ


ವಿಜಯಪುರ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ೨೦೨೫-೨೬ ನೇ ಸಾಲಿನ ಜೂನ ತಿಂಗಳಿನಿಂದ ಇಲ್ಲಿಯವರೆಗೆ ಸುರಿದಿರುವ ಮಳೆಯಿಂದಾಗಿ ಇಡೀ ಜಿಲ್ಲೆಯಲ್ಲಿ ಸಾಕಷ್ಟು ರೈತರ ಬೆಳೆಗಳು ಸಂಪೂರ್ಣ ನಷ್ಟಗೊಂಡಿವೆ ಜೊತೆಗೆ ವಿಜಯಪುರ ಜಿಲ್ಲೆಯ ಭೀಮಾ, ಕೃಷ್ಣಾ ಹಾಗೂ ಡೋಣಿ ನದಿಯ ಪ್ರವಾಹದಿಂದಾಗಿಯೂ ಸಾಕಷ್ಟು ಬೆಳೆ ನಷ್ಟಗೊಂಡಿವೆ, ಕೂಡಲೇ ತಾಲೂಕಿನ ಎಲ್ಲಾ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಾಗೇವಾಡಿ ತಹಶಿಲ್ದಾರರಾದ ವಾಯ್.ಎಸ್. ಸೋಮನಕಟ್ಟಿ ಅವರಿಗೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ರೈತರು ಮನವಿ ಸಲ್ಲಿಸಿ ಜಿಲ್ಲಾಡಳಿತಕ್ಕೂ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿ ಕೂಡಲೇ ಪರಿಹಾರ ಮತ್ತು ಫಸಲ್ ಭೀಮಾ ಯೋಜನೆಯಡಿ ವಿಮೆ ನೀಡಬೇಕು ಎಂದರು.

ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ಜಿಲ್ಲೆಯ ೧೩ ತಾಲೂಕಿನಲ್ಲಿ ಯಾವುದೇ ಸಮೀಕ್ಷೆ ಹೆಸರಲ್ಲಿ ವಿಳಂಬ ಮಾಡದೇ ಪ್ರತಿಯೊಂದು ಹಳ್ಳಿಯ ಸರ್ವ ರೈತರಿಗೂ ಒಣ ಬೇಸಾಯಕ್ಕೆ ೫೦ ಸಾವಿರ , ನೀರಾವರಿಗೆ ೧ ಲಕ್ಷ ಹಾಗೂ ಬಹು ವಾಷಿಕ ಬೆಳೆಗಳಿಗೆ ೨ ಲಕ್ಷ ನಷ್ಟ ಪರಿಹಾರ ನೀಡಬೇಕು, ಜಂಟಿ ಸಮೀಕ್ಷೆ, ವೈಮಾನಿಕ ಸಮೀಕ್ಷೆ ಹೆಸರಲ್ಲಿ ತಡ ಮಾಡದೇ ಕೂಡಲೆ ಪರಿಹಾರ ನೀಡುವಂತೆ ಆಗ್ರಹ ಮಾಡಿದರು.

ರಾಜ್ಯ ಉಪಾಧ್ಯಕ್ಷರಾದ ಕಲ್ಲು ಸೋನ್ನದ ಅವರು ಮಾತನಾಡುತ್ತಾ ಈ ವರ್ಷ ಹಿಂದೆAದೂ ಕಂಡು ಕಾಣರಿಯದಂತಹ ಮಳೆ ಹಾಗೂ ಪ್ರವಾಹ ಉಂಟಾಗಿ ಬಾಗೇವಾಡಿ ತಾಲೂಕಿನ ಎಲ್ಲಾ ರೈತರ ತೊಗರಿ, ಹತ್ತಿ, ಸೆಂಗಾ ಸೇರಿದಂತೆ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ ಸೇರಿದಂತೆ ಎಲ್ಲಾ ಬೆಳೆಗಳು ಮಳೆ ನೀರಿನಿಂದ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗ ಬಂದಿದೆ, ಕೂಡಲೇ ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಎಂದರು.

ಈ ವೇಳೆ ತಾಲೂಕಾ ಅಧ್ಯಕ್ಷರಾದ ಮುದಕನ್ಣ ಹೋರ್ತಿ, ಮುತ್ತು ಹಾಲ್ಯಾಳ, ರೇವಣಸಿದ್ಧ ಮಣೂರ, ಜಿಲ್ಲಾ ಸಂಚಾಲಕರಾದ ಜಕರಾಯ ಪೂಜಾರಿ, ಕೋಲಾರ ಅಧ್ಯಕ್ಷರಾದ ಸೋಮು ಬಿರಾದಾರ ಮಾತನಾಡುತ್ತಾ ಈ ವರ್ಷ ರೈತರ ಪರಿಸ್ಥಿತಿ ಗಂಭೀರವಾಗಿ ನಷ್ಟದ ಸ್ಥಿತಿಯಲ್ಲಿ ಮುಂದಿನ ಬದುಕಿನ ಚಿಂತೆ ಮಾಡುವಂತಾಗಿದೆ ಕೂಡಲೇ ಯೋಗ್ಯ ಪರಿಹಾರವನ್ನು ಕೂಡಲೇ ನೀಡಬೇಕು ಎಂದರು.

ಜಂಟಿ ಸಮೀಕ್ಷೆ ಮಾಡಿರುವ ಕುರಿತು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಹಚ್ಚಿ ಈ ಕುರಿತು ಪತರಿಕಾ ಹೇಳಿಕೆ ನೀಡಿ ಇನ್ನು ಯಾರಾದರು ಉಳಿದ್ದಿದರೆ ಅಂತವರು ನಿಮ್ಮ ಗ್ರಾಮ ಲೆಕ್ಕಾಧಿಕಾರಿಗಳ ಹತ್ತಿರ ಮನವಿ ಸಲ್ಲಿಸಬಹುದು, ನಷ್ಟಗೊಂಡ ರೈತರಿಗೆ ಪರಿಹಾರವನ್ನು ಸಿಗುವಂತೆ ನಾವೂ ಎಲ್ಲಾ ಅಧಿಕಾರಿಗಳೊಂಡನೆ ಸಭೆ ಮಾಡಿ ವರದಿ ತಯಾರಿಸಿದ್ದೆವೆ ಎಂದು ಮನವಿ ಸ್ವೀಕರಿಸಿದ ತಾಹಶಿಲ್ದಾರರು ಮಾತನಾಡಿದರು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ, ಜಿಲ್ಲಾ ಸಂಚಾಲಕಲರಾದ ಸಂಗಪ್ಪ ಟಕ್ಕೆ, ನಗರ ಘಟಕದ ಅಧ್ಯಕ್ಷರಾದ ಸಚೀನ ಸವನಳ್ಳಿ, ತಾಲೂಕಾ ಉಪಾಧ್ಯಕ್ಷರಾದ ನಾಮದೇವ ರಾಠೋಡ,ಶಶಿಕಾಂತ ಬಿರಾದಾರ,ಬಸವರಾಜ ಅಂಬಲಿ, ಪರಶುರಾಮ ಗೊಳಸಂಗಿ, ರಾವುತ್ ಬರಗಿ, ಸಿದ್ದು ಕುಂಬಾರ, ಬಸವರಾಜ ಬಿಜಾಪುರ, ಬಸಪ್ಪ ಕಾರಜೋಳ, ಅಲ್ಲಾಭಕ್ಷ ಚಪ್ಪರಬಂದ, ದರೇಪ್ಪ ಹೊಸಮನಿ, ಕಾಶಿನಾಥ ಹಾರಿವಾಳ, ಮಲ್ಲಿಕಾರ್ಜುನ ಮೇಲ್ದಾಪುರ, ಕಲ್ಲಪ್ಪ ಉಳ್ಳಾಗಡ್ಡಿ, ದುಂಡಪ್ಪ ಗೊಳಸಂಗಿ, ಭೀರಪ್ಪ ಸಂಕನಾಳ, ಮುತ್ತಪ್ಪ ಶಟ್ಟೆಪ್ಪಗೋಳ, ವೀರಭದ್ರ ಬಡಿಗೇರ, ಮಾಳು ಬಸ್ತಾಳ, ಹಣಮಂತ ಹೊಸಮನಿ, ಶೇಕಪ್ಪ ಮಾದರ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande