ಮನರೇಗಾ ಜಾಬ್ ಕಾರ್ಡ್‌ಗೆ ಇ-ಕೆವೈಸಿ ಮಾಡಲು ಶ್ರಮ ವಹಿಸಿ : ಚಂದ್ರಶೇಖರ್ ಕಂದಕೂರ
ಗದಗ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮನರೇಗಾ ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್‌ಗಳ ಇ-ಕೆವೈಸಿ ವ್ಯಾಲಿಡೇಶನ್‌ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ ಸಿಬ್ಬಂದಿಗೆ ತಾಪಂ ಕಾರ್ಯನ
ಪೋಟೋ


ಗದಗ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ

ಮನರೇಗಾ ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್‌ಗಳ ಇ-ಕೆವೈಸಿ ವ್ಯಾಲಿಡೇಶನ್‌ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ ಸಿಬ್ಬಂದಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ. ಕಂದಕೂರ ಸೂಚಿಸಿದ್ದಾರೆ.

ಈ ಕಾರ್ಯಕ್ಕೆ ಎಲ್ಲಾ ನರೇಗಾ ಕೂಲಿಕಾರರು ಸಕ್ರಿಯವಾಗಿ ಭಾಗವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ಕರೆ ನೀಡಿದರು.

ರೋಣ ತಾಲೂಕ ಪಂಚಾಯತ ಸಭಾಂಗಣದಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಮನರೇಗಾ ಸಿಬ್ಬಂದಿ ಜಿಕೆಎಂ, ಬಿಎಫ್‌ಟಿ, ಇಂಜಿನಿಯರ್‌ಗಳು ಮತ್ತು ಇತರ ಸಿಬ್ಬಂದಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಚಂದ್ರಶೇಖರ್ ಬಿ ಕಂದಕೂರ ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ ವ್ಯಾಲಿಡೇಶನ್‌ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು, ಎಂದು ಒತ್ತಿ ಹೇಳಿದರು.

ಮನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರ ಮಾಹಿತಿಯನ್ನು ಎನ್‌ಎಂಎಂಎಸ್ (ನರೇಗಾ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ತಂತ್ರಾಂಶದಲ್ಲಿ ಇ-ಕೆವೈಸಿ ಮೂಲಕ ಅಪ್‌ಡೇಟ್ ಮಾಡಲಾಗುತ್ತಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗಿದ್ದು, ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ನರೇಗಾ ಶಾಖೆಯ ಐಇಸಿ ವಿಭಾಗವು ತಯಾರಿಸಿದ ಧ್ವನಿ ಮುದ್ರಿಕೆಯನ್ನು ಕಸ ಸಂಗ್ರಹ ವಾಹನಗಳ ಮೂಲಕ ಪ್ರಸಾರ ಮಾಡಲು ಸೂಚಿಸಲಾಗಿದೆ.

ಇನ್ನು ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಗಳಿಗೆ ಇ-ಕೆವೈಸಿ ಅಪ್‌ಡೇಟ್ ಕಾರ್ಯಕ್ಕೆ ತರಬೇತಿ ನೀಡಲಾಗಿದ್ದು, ಈ ಮೂಲಕ ಪ್ರಗತಿ ಸಾಧಿಸಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಗ್ರಾಮಗಳಲ್ಲಿ ಕೂಲಿಕಾರರು ವೈಯಕ್ತಿಕ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಇರುವುದರಿಂದ, ಮನೆ-ಮನೆ ಭೇಟಿಯ ಸಂದರ್ಭದಲ್ಲಿ ಮೇಟ್‌ಗಳು ಅಥವಾ ನರೇಗಾ ಸಿಬ್ಬಂದಿಗೆ ಅವರು ಲಭ್ಯವಾಗದಿರುವುದು ಇ-ಕೆವೈಸಿ ಪ್ರಕ್ರಿಯೆಯನ್ನು ನಿಧಾನಗೊಳಿಸಿದೆ. ಇದರಿಂದ ಭವಿಷ್ಯದಲ್ಲಿ ಕೂಲಿಕಾರರಿಗೆ ಕೆಲಸ ನೀಡುವಾಗ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮೇಟ್‌ಗಳ ಮೂಲಕವೂ ಈ ಸೌಲಭ್ಯವನ್ನು ಪಡೆಯಬಹುದು. ಇ-ಕೆವೈಸಿ ಯೋಜನೆಯು ಮನರೇಗಾ ಕಾರ್ಯಕ್ರಮದ ಪಾರದರ್ಶಕ ಅನುಷ್ಠಾನಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ, ಎಲ್ಲಾ ಕೂಲಿಕಾರರು ಮತ್ತು ಕಾಯಕ ಬಂಧುಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್‌ಡೇಟ್ ಮಾಡಿಸಿಕೊಳ್ಳಬೇಕು, ಎಂದು ಚಂದ್ರಶೇಖರ್ ಒತ್ತಾಯಿಸಿದರು.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಯ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande