ಹುಬ್ಬಳ್ಳಿ, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ನಗರದ ಶ್ರೀ ವಿಜಯ ಮಹಾಂತೇಶ ಲಲಿತ ಕಲಾಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಧಾರವಾಡ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಧಾರವಾಡ, ತಾಲೂಕು ಪಂಚಾಯತ ಹುಬ್ಬಳ್ಳಿ ಹಾಗೂ ಶ್ರೀ ಮೈತ್ರಿ ಸಮಗ್ರ ವ್ಯಸನಮುಕ್ತ ಪುನರ ವಸತಿ ಕೇಂದ್ರ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ.ಜಿ.ವಿ.ಓಂಕಾರಿಗೌಡ್ರ ಅವರು ಮಾತನಾಡಿ, ಭಾರತವು ಯುವ ಜನಾಂಗದಿಂದ ಕೂಡಿದ ಸದೃಢ ದೇಶ ಕಟ್ಟಲು ಯುವಕರ ಕೊಡುಗೆ ಅವಶ್ಯಕವಾಗಿರುತ್ತದೆ. ಆದರೆ ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕಾರಣ ಇಂತಹ ವ್ಯಸನಗಳಿಂದ ದೂರವಾಗಿ ಆರೋಗ್ಯಕರಾಗಿ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಶ್ರೀ ವಿಜಯ ಮಹಾಂತೇಶ ಲಲಿತ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಆರ್.ಎಫ್. ಹಿರೇಗೌಡರ ಮಾತನಾಡಿ, ಯುವ ಪೀಳಿಗೆಯ ಮಾರಕ ದುಶ್ಚಟಗಳಿಗೆ ದಾಸರಾಗದೇ, ನಶಾ ವಸ್ತುಗಳಿಂದ ದೂರವಿದ್ದು, ಸದೃಢವಂತರಾಗಬೇಕೆಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa