ಚಟುವಟಿಕೆ ನಿಷೇಧ : ಬಿಜೆಪಿ ಜಾರಿಗೆ ತಂದ ಕಾನೂನು ಈಗ ಅನುಷ್ಠಾನ - ಶರಣ ಪ್ರಕಾಶ ಪಾಟೀಲ
ಬೆಂಗಳೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್
Patil


ಬೆಂಗಳೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್‌ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸರ್ಕಾರಿ ಅಧೀನದ ಸ್ಥಳಗಳಲ್ಲಿ, ಶಾಲಾ-ಕಾಲೇಜು ಆವರಣದಲ್ಲಿ ಅನುಮತಿ ಪಡೆಯಬೇಕು ಎಂದು ಅವರು ಹೇಳಿದ್ದಾರೆ. ಇದಲ್ಲಿ ತಪ್ಪೇನೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಜನರನ್ನು ಹಾದಿ ತಪ್ಪಿಸುವುದೇ ಬಿಜೆಪಿಯ ಹುನ್ನಾರವಾಗಿದೆ. ಜನ ಇದಕ್ಕೆಲ್ಲ ಸೊಪ್ಪು ಹಾಕುವುದಿಲ್ಲ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande