ಕೊಪ್ಪಳ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿ0ದ ಉಚಿತವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ, ದುರಸ್ತಿ ಹಾಗೂ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿರಿಯರಿಗೆ ನವೆಂಬರ್ ತಿಂಗಳಲ್ಲ್ಲಿ ತರಬೇತಿಯನ್ನು ಆರಂಭಿಸಲಾಗುತ್ತದೆ. ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ.
ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿ0ದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಆಸಕ್ತರು ವೆಬ್ಸೈಟ್ www.rsetihaliyal.org ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ನವೆಂಬರ್ 5 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 8217236973, 9483485489, 9482188780 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್