ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ರಂಗೋಲಿ ಸ್ಪರ್ಧೆ
ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ತಾಲೂಕ ಪಂಚಾಯತಿ ಹುಬ್ಬಳ್ಳಿಯ ಸಾಮರ್ಥ್ಯಸೌಧನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಧಾರವಾಡ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಧಾರವಾಡ, ತಾಲೂಕು ಪಂಚಾಯತ ಹುಬ್ಬಳ್ಳಿ ಹಾಗೂ ಮೈತ್ರಿ ಸಮಗ್ರ ವ್ಯಸನಮುಕ್ತ ಪುನರ ವಸತಿ ಕೇಂದ್ರ ಹ
Competition


ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ತಾಲೂಕ ಪಂಚಾಯತಿ ಹುಬ್ಬಳ್ಳಿಯ ಸಾಮರ್ಥ್ಯಸೌಧನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಧಾರವಾಡ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಧಾರವಾಡ, ತಾಲೂಕು ಪಂಚಾಯತ ಹುಬ್ಬಳ್ಳಿ ಹಾಗೂ ಮೈತ್ರಿ ಸಮಗ್ರ ವ್ಯಸನಮುಕ್ತ ಪುನರ ವಸತಿ ಕೇಂದ್ರ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳಾದ ಸವಿತಾ ಕಾಳೆ ಅವರು ಮಾತನಾಡಿ, ಭಾರತವು ಯುವ ಜನಾಂಗದಿಂದ ಕೂಡಿದ ಸದೃಢ ದೇಶ ಕಟ್ಟಲು ಯುವಕರ ಕೊಡುಗೆ ಅವಶ್ಯಕವಾಗಿರುತ್ತದೆ.ಆದರೆ ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕಾರಣ ಇಂತಹ ವ್ಯಸನಗಳಿಂದ ದೂರವಾಗಿ ಆರೋಗ್ಯಕರಾಗಿ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande