
ಧಾರವಾಡ, 22 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕನ್ನಡ ಅಭಿವೃದ್ಧಿ ಯೋಜನೆಯಡಿ ಭಾರತೀಯ ಭಾಷಾ ಸಂಸ್ಥಾನ, ಮಾನಸ ಗಂಗೋತ್ರಿ ಮೈಸೂರು ಇವರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿದೆ. ಸಂಸ್ಥೆಯಿಂದ ಪ್ರಸಕ್ತ 2025-26 ನೇ ಸಾಲಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣದ 39 ನೇಯ ತಂಡದ ತರಬೇತಿ ಆರಂಭಿಸಲಾಗುವುದು.
ಸದರಿ ಸಂಸ್ಥೆಯಿಂದ ಅರ್ಜಿಗಳನ್ನು ಪಡೆದು, ನವೆಂಬರ್ 30, 2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa