ವಿಜಯಪುರ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಮಾವಾ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.
ಕಿರಣ ದೊಡಮನಿ, ಸಾಗರ ಪಾಟೀಲ್ ಬಂಧಿತ ಆರೋಪಿಗಳು. ಆರೋಗ್ಯಕ್ಕೆ ಹಾನಿಕಾರಕ ಆಗುವ ವಸ್ತುಗಳನ್ನು ಬಳಸಿ ಅಕ್ರಮವಾಗಿ ಮಾವಾ ತಯಾರಿಸಿ, ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು 1ಕೆಜಿ 400 ಗ್ರಾಂ ಮೌಲ್ಯದ ಮಾವಾ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ದೇವರಹಿಪ್ಪರಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande