
ಹೊಸಪೇಟೆ, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆ ಗುರುತಿಸಿ, ಅವರಿಗೆ ಉತ್ತೇಜನ ನೀಡುವ ಮತ್ತು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪೆÇ್ರೀತ್ಸಾಹಿಸಲು ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಏರ್ಪಡಿಸುವ ಸಲುವಾಗಿ ವಿವಿಧ ಪ್ರಕಾರಗಳ ಕಲಾ ಪ್ರತಿಭೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ತಿಳಿಸಿದ್ದಾರೆ.
ಬಾಲ ಪ್ರತಿಭೆ ಹಾಗೂ ಕಿಶೋರ ಪ್ರತಿಭೆ ವಿಭಾಗದಲ್ಲಿ ಏಕ ವ್ಯಕ್ತಿಯ ಸ್ಪರ್ಧೆಯಲ್ಲಿ ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದ ಗೀತೆ, ಕರ್ನಾಟಕ, ಹಿಂದೂಸ್ತಾನಿ ವಾದ್ಯ ಸಂಗೀತ ಹಾಗೂ ಶಾಸ್ತ್ರೀಯ ಸಂಗೀತದ ಗಾಯನ ಕಲಾ ಪ್ರಕಾರಗಳಿವೆ. ಬಾಲ ಪ್ರತಿಭೆ 08 ರಿಂದ 14 ವರ್ಷದೊಳಗಿನ ಹಾಗೂ ಕಿಶೋರ ಪ್ರತಿಭೆ 14 ರಿಂದ 18 ವರ್ಷದ ಒಳಗಿನವರಾಗಿರಬೇಕು.
ಯುವ ಪ್ರತಿಭೆ ವಿಭಾಗದಲ್ಲಿ ಏಕ ವ್ಯಕ್ತಿಯ ಸ್ಪರ್ಧೆಯಲ್ಲಿ ಆಶುಭಾಷಣ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಕರ್ನಾಟಕ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹಾಗೂ ವಾದ್ಯ ಸಂಗೀತ ಕಲಾ ಪ್ರಕಾರಗಳಿವೆ. ಯುವ ಪ್ರತಿಭೆ 18 ರಿಂದ 30 ವರ್ಷದೊಳಗಿರಬೇಕು. ಸಮೂಹ ಸ್ಪರ್ಧೆಯಲ್ಲಿ ನಾಟಕ ಕಲಾ ಪ್ರಕಾರ ಇದ್ದು, ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಮತ್ತು ಗರಿಷ್ಠ 15 ಮೀರಬಾರದು.
ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ತಾವು ವ್ಯಾಸಂಗ ಮಾಡುತ್ತಿರುವ ವಿದ್ಯಾ ಸಂಸ್ಥಯಿಂದ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು. ಒಬ್ಬರಿಗೆ ಒಂದು ಕಲಾ ಪ್ರಕಾರದಲ್ಲಿ ಮಾತ್ರ ಸ್ಪರ್ಧಿಸಲು ಅವಕಾಶವಿದ್ದು, ಶಾಲಾ ಮುಖ್ಯಸ್ಥರು ತಮ್ಮ ಶಾಲಾ ಮೂಲಕ ಸ್ಪರ್ದಿಸುವ ಸ್ಪರ್ಧಿಗಳು ಅರ್ಜಿ ಸಲ್ಲಿಸುವಾಗ ತಾವು ಭಾಗವಹಿಸುವ ಕಲಾ ಪ್ರಕಾರ ಹಾಗೂ ವಿಭಾಗವನ್ನು ನಮೂದಿಸಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕು.
ಖಾಸಗಿ ಸ್ಪರ್ಧಿಯಾಗಿದ್ದಲ್ಲಿ ಶಾಲಾ-ಕಾಲೇಜಿನ ಜನ್ಮ ದಿನಾಂಕ ದೃಢೀಕರಣ ಪತ್ರ ಅಥವಾ ಪಂಚಾಯಿತಿ, ಪುರಸಭೆ, ನಗರ ಸಭೆಗಳಿಂದ ನೀಡುವ ಜನನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಸ್ಪರ್ಧೆಗಳಲ್ಲಿ ಭಾಗವಹಿಸುವವರು ಅರ್ಜಿಯನ್ನು ನ.10 ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಠಡಿ ಸಂ 2, ಮೊದಲನೇ ಮಹಡಿ, ತಹಶಿಲ್ದಾರ ಕಛೇರಿ ಕಟ್ಟಡ ಹೊಸಪೇಟೆ ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದು. ವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ನಿಯಮಗಳು ಮತ್ತು ನಿಬಂಧನೆಗಳಗಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್