ಸರ್ಕಾರಕ್ಕೆ ಹೈಕೋರ್ಟ್‌ ಪೀಠ ಪಾಠ : ಸಚಿವ ಪ್ರಲ್ಹಾದ ಜೋಶಿ
ನವದೆಹಲಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಆರ್‌ಎಸ್‌ಎಸ್‌ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ
Joshi


ನವದೆಹಲಿ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಆರ್‌ಎಸ್‌ಎಸ್‌ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ.

ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ‎ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೋಶಿ ಖಂಡಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್‌ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ ಎಂದ ಸಚಿವರು, ‎ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ‎ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande