
ವಿಜಯಪುರ, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳು ಮಂಜೂರಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಸತಿ ನಿಲಯ ಪ್ರಾರಂಭಿಸುವಂತೆ ನೂರಾರು ವಿದ್ಯಾರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಸರಕಾರ ರಾಜ್ಯದಲ್ಲಿ ಒಟ್ಟು 62 ವಸತಿ ನಿಲಯ ಪ್ರಾರಂಭಿಸಲು ನಿರ್ಧರಿಸಿದ್ದು, ವಿಜಯಪುರ ಜಿಲ್ಲೆಗೆ ಎರಡು ಹಾಸ್ಟೇಲುಗಳನ್ನು ಮಂಜೂರು ಮಾಡಿದೆ.
ಇದರಿಂದ ಎಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande