
ಧಾರವಾಡ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಆಗಸ್ಟ್-2025 ಮಾಹೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತೀವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಪ್ರೂಟ್ ಐಡಿ ಹೊಂದಿರುವ ರೈತರಿಗೆ ಮತ್ತು ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಭೂಮಿ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನಲ್ಲಿ 11,981 ರೈತರು ಫಲಾನುಭವಿಗಳು ಇದ್ದು, 12,462.49 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.10,59,97,343 ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ನವಲಗುಂದ ತಾಲೂಕಿನಲ್ಲಿ 18,433 ರೈತರು ಫಲಾನುಭವಿಗಳು ಇದ್ದು, 20,685.16 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.18,74,89,876 ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ಹುಬ್ಬಳ್ಳಿ ತಾಲೂಕಿನಲ್ಲಿ 11,058 ರೈತರು ಫಲಾನುಭವಿಗಳು ಇದ್ದು 13,856.43 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.11,78,05,212 ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ಕುಂದಗೋಳ ತಾಲೂಕಿನಲ್ಲಿ 10,912 ರೈತರು ಫಲಾನುಭವಿಗಳು ಇದ್ದು, 11,261.02 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.9,58,22,368 ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ಹುಬ್ಬಳ್ಳಿ ನಗರ ತಾಲೂಕಿನಲ್ಲಿ 839 ರೈತರು ಫಲಾನುಭವಿಗಳು ಇದ್ದು, 769.12 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.65,51,452 ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ಅಣ್ಣಿಗೇರಿ ತಾಲೂಕಿನಲ್ಲಿ 11,994 ರೈತರು ಫಲಾನುಭವಿಗಳು ಇದ್ದು, 13,875.13 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.11,79,64,677 ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ.
ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯಲ್ಲಿ 6 ತಾಲ್ಲೂಕಿನ ಬೆಳೆ ಪರಿಹಾರವನ್ನು ಎನ್ ಡಿಆರ್ ಎಫ್, ಎಸ್.ಡಿಆರ್ ಎಫ್ ಮಾರ್ಗಸೂಚಿಯಂತೆ ಒಟ್ಟು 65,217 ರೈತ ಫಲಾನುಭವಿಗಳ 72,909.36 ಹೆಕ್ಟರ್ ಪ್ರದೇಶಕ್ಕೆ ಸಂಬಂಧಿಸಿದಂತೆ ರೂ.63.16 ಕೋಟಿ ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa