
ಹೊಸಪೇಟೆ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪಂಚ ಗ್ಯಾರಂಟಿ ಯೋಜನೆಗಳ ,ಅನುಷ್ಠಾನ, ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ.
ಇಂದು ರಾತ್ರಿ 07 ಗಂಟೆಗೆ ಆಗಮಿಸಿ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆ.11:30ಕ್ಕೆ ಶ್ರೀಸಾಯಿ ಲೀಲಾ ರಂಗ ಮಂದಿರದಲ್ಲಿ ನಡೆಯುವ ಗ್ಯಾರಂಟಿ ಯೋಜನೆಗಳ ,ಅನುಷ್ಠಾನ, ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಸಂಜೆ 04 ಗಂಟೆಗೆ ಜಿಲ್ಲೆಯಿಂದ ನಿರ್ಗಮಿಸುವರು ಎಂದು ಆಪ್ತ ಕಾರ್ಯದರ್ಶಿ ಆರ್.ರಾಜಶೇಖರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್