
ಹೊಸಪೇಟೆ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಎಂ.ಎನ್ ಹೆಗಡೆ ಅವರು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಸುಬ್ರಮಣ್ಯ ಎಸ್.ಕುಮಟ ತಿಳಿಸಿದ್ದಾರೆ.
ಅಕ್ಟೋಬರ್.31 ರಂದು ರಾತ್ರಿ 12:30 ಕ್ಕೆ ಆಗಮಿಸಿ ನಗರದ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆ.10 ಗಂಟೆಗೆ ಶ್ರೀಸಾಯಿ ಲೀಲಾ ರಂಗ ಮಂದಿರದಲ್ಲಿ ನಡೆಯುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಸಂಜೆ 04 ಗಂಟೆಗೆ ರಸ್ತೆಯ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್