ತಾಲ್ಲೂಕು ಮಟ್ಟದಲ್ಲಿ ಸ್ವೀಪ್ ಸಮಿತಿ ರಚಿಸಿ : ಪಿಡಿ ಪ್ರಕಾಶ ವಿ.
ಕೊಪ್ಪಳ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಮತದಾರರ ಪಟ್ಟಿ ಸಿದ್ದಪಡಿಸುವಂತೆ ಭಾರತ ಚುನಾವಣಾ ಆಯೋಗವು ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಸಮಿತಿಯನ್ನು ರಚಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿಯೂ ಸ್ವೀಪ್ ಸಮಿತಿಯನ್ನು
ತಾಲ್ಲೂಕು ಮಟ್ಟದಲ್ಲಿ ಸ್ವೀಪ್ ಸಮಿತಿ ರಚಿಸಿ: ಪಿಡಿ ಪ್ರಕಾಶ ವಿ.


ತಾಲ್ಲೂಕು ಮಟ್ಟದಲ್ಲಿ ಸ್ವೀಪ್ ಸಮಿತಿ ರಚಿಸಿ: ಪಿಡಿ ಪ್ರಕಾಶ ವಿ.


ಕೊಪ್ಪಳ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಮತದಾರರ ಪಟ್ಟಿ ಸಿದ್ದಪಡಿಸುವಂತೆ ಭಾರತ ಚುನಾವಣಾ ಆಯೋಗವು ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಸಮಿತಿಯನ್ನು ರಚಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿಯೂ ಸ್ವೀಪ್ ಸಮಿತಿಯನ್ನು ರಚಿಸಿ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಪದವೀಧರ ಶಿಕ್ಷಕರಿಗೆ ಮಾಹಿತಿ ನಿರ್ದೇಶನ ನೀಡಿ ಎಂದು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಪ್ರಕಾಶ ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರದಂದು ಜಿಲ್ಲಾ ಪಂಚಾಯತಿಯ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪದವೀಧರ ಶಿಕ್ಷಕರು ಈ ಹಿಂದೆ ತಮ್ಮ ಹೆಸರನ್ನು ಶಿಕ್ಷಕರ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿದ್ದರೂ ಈ ಬಾರಿಯೂ ಮತ್ತೊಮ್ಮೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಪ್ರೌಢಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲೆ ಮೇಲ್ಮಟ್ಟದ ಎಲ್ಲ ಉಪನ್ಯಾಸಕರಿಗೆ ಡಿಡಿಪಿಐ, ಡಿಡಿಪಿಯು ಮತ್ತು ಪದವಿ ಶಿಕ್ಷಣ ಇಲಾಖೆಯಿಂದ ಸೂಕ್ತ ನಿರ್ದೇಶನ ನೀಡಬೇಕು. ತಾಲ್ಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಕಾಲೇಜು ಪ್ರಾಂಶುಪಾಲರಿಗೆ ಸಭೆ ನಡೆಸುವಂತೆ ಸೂಚನೆ ನೀಡಿ, ಅಗತ್ಯ ಮಾರ್ಗದರ್ಶನ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸ್ವೀಪ್ ಸಮಿತಿಯನ್ನು ರಚಿಸಬೇಕು ಎಂದು ಅವರು ಹೇಳಿದರು.

ತಾಲ್ಲೂಕು ಮಟ್ಟದ ಸಮಿತಿಯು ಅಧ್ಯಕ್ಷರಾಗಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳಾಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೌರಾಯುಕ್ತರು ಹಾಗೂ ನಗರ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಸದಸ್ಯರಾಗಿರುತ್ತಾರೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೇಮಕ ಮಾಡಿದ ಸಮಿತಿಯು ಮತದಾನ ನೋಂದಣಿ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಂದರೆ ದಿನಾಂಕ: 06-11-2025 ರವರೆಗೆ ಪ್ರತಿ ಶನಿವಾರ ಅಧ್ಯಕ್ಷರ ಕಚೇರಿಯಲ್ಲಿ ಸಭೆ ಸೇರಿ, ಅರ್ಹ ಮತದಾರರನ್ನು ಗುರುತಿಸುವಲ್ಲಿ ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ರೀತಿಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಕುಲಪತಿಗಳು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಇತರೆ ಸಮುಚಿತವೆನಿಸುವ ಅಧಿಕಾರಿಗಳ ಸಭೆಯನ್ನು ಕಡ್ಡಾಯವಾಗಿ ಕರೆದು, ಅರ್ಹ ಮತದಾರರಿಂದ ನಮೂನೆ 19 ರಲ್ಲಿ ನೋಂದಣಿಗಾಗಿ ಅರ್ಜಿಯನ್ನು ಪಡೆದು ಸಂಬಂಧಪಟ್ಟ ಸಹಾಯಕ ಮತದಾನ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸೋಮಶೇಖರ, ನಗರಸಭೆಯ ಪೌರಾಯುಕ್ತರಾದ ವೆಂಕಟೇಶ ನಾಗನೂರ, ಪಿಯು ವಿಭಾಗದ ಎಸ್‍ಎಲ್‍ಎಮ್‍ಟಿ ಎಸ್.ಎ.ಮೆಳ್ಳಿ, ಪ್ರೌಢಶಾಲಾ ವಿಭಾಗದ ಎಸ್‍ಎಲ್‍ಎಮ್‍ಟಿ ಎಸ್.ಬಿ.ಕುರಿ, ಸ್ವೀಪ್ ಸಮಿತಿಯ ಶ್ರೀನಿವಾಸ ಚಿತ್ರಗಾರ, ವಾರ್ತಾ ಇಲಾಖೆ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande