ನವದೆಹಲಿ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜಸ್ಥಾನದ ಜೈಪುರದ ಸವಾಯಿ ಮಾನ್ಸಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಏಳು ರೋಗಿಗಳು ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಎಕ್ಸನಲ್ಲಿ ಪ್ರತಿಕ್ರಿಯಿಸಿರುವ ಅವರು, “ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿ ತೀವ್ರ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಬೇಗ ಗುಣಮುಖರಾಗಲಿ,” ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa