ಶೀಘ್ರವಾಗಿ ಅರ್ಜಿ ವಿಲೇವಾರಿ ಸಾಧನೆ ; ರಾಜ್ಯಕ್ಕೆ ರಾಯಚೂರು ಜಿಲ್ಲೆ ಪ್ರಥಮ
ರಾಯಚೂರು, 06 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ನಾನಾ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ರಾಯಚೂರು ಜಿಲ್ಲೆಯ ನಾಡ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿಯನ್ನು ವೇಗಗೊಳಿಸಿ ಸಾಧನೆ ಮಾಡಿರುವುದಕ್ಕೆ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕ
ಶೀಘ್ರವಾಗಿ ಅರ್ಜಿ ವಿಲೇವಾರಿಗೊಳಿಸಿದ ಸಾಧನೆ; ರಾಜ್ಯಕ್ಕೆ ರಾಯಚೂರು ಜಿಲ್ಲೆ ಪ್ರಥಮ


ರಾಯಚೂರು, 06 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ನಾನಾ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ರಾಯಚೂರು ಜಿಲ್ಲೆಯ ನಾಡ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿಯನ್ನು ವೇಗಗೊಳಿಸಿ ಸಾಧನೆ ಮಾಡಿರುವುದಕ್ಕೆ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ಅವರಿಗೆ ಕಂದಾಯ ಇಲಾಖೆಯ ಆಯುಕ್ತರಾದ ಮುಲ್ಲೈ ಮುಹಿಲನ್ ಅವರು ಅಭಿನಂದನೆ ತಿಳಿಸಿದ್ದಾರೆ.

ರಾಯಚೂರ ಜಿಲ್ಲೆಯ ನಾಡ ಕಚೇರಿಗಳಲ್ಲಿ ಆಗಸ್ಟ್-2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 33,870 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.90 ರಷ್ಟು ವಿಲೇವಾರಿ ಮಾಡಿ 6.18 ಸಿಗ್ಮಾ ಮೌಲ್ಯ ಪಡೆದಿರುತ್ತೀರಿ. 10.04 ವಿಲೇವಾರಿ ಸೂಚ್ಯಂಕದ ಪ್ರಕಾರ ತಮ್ಮ ಜಿಲ್ಲೆಯಲ್ಲಿ 11.04 ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಆಗಸ್ಟ್-2025ರ ಮಾಹೆಯಲ್ಲಿ ರಾಯಚೂರಜ ಜಿಲ್ಲೆಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯವಾಗಿದೆ.

ನಿಮ್ಮ ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡ ಕಚೇರಿ/ಅಟಲ್‍ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಯ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಆದ್ದರಿಂದ, ಅಟಲ್‍ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯೂ ಸಹ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಕಂದಾಯ ಇಲಾಖೆಯ ಆಯುಕ್ತರಾದ ಮುಲ್ಲೈ ಮುಹಿಲನ್ ಅವರು ರಾಯಚೂರು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರಿಗೆ ಅಭಿನಂದನಾ ಪತ್ರ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande