ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಿಗೆ ಅಧಿಕಾರ ಪುನಃ ಸ್ಥಾಪನೆ
ಬೆಂಗಳೂರು, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರ ಹಾಗೂ ಅಕ್ರಮಗಳಿಗೆ
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಿಗೆ ಅಧಿಕಾರ ಪುನಃ ಸ್ಥಾಪನೆ


ಬೆಂಗಳೂರು, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರ ಹಾಗೂ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆಗೆ ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ.

ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದ ಅಧಿಕಾರಿಗಳಿಗೆ ನೀಡಲಾಗಿದ್ದ ಎಲ್ಲಾ ಜವಾಬ್ದಾರಿಗಳನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ವಿಷಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಿಬ್ಬಂದಿ ಸೇವಾ ವಿಷಯ, ಹಣಕಾಸು ನಿರ್ವಹಣೆ, ಸಂಗ್ರಹಣೆ, ಖರೀದಿ, ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಎಲ್ಲಾ ಪೂರ್ಣ ಜವಾಬ್ದಾರಿಯನ್ನು ಈ ಹಿಂದೆ ಇದ್ದರಂತೆ ನಿರ್ದೇಶಕರಿಗೆ ಪುನಃ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande