ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಪಕ್ಷಗಳ ಸಹಕಾರ ಅಗತ್ಯ : ಡಿಸಿ
ವಿಜಯಪುರ, 08 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತ ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮತದಾರರ ಪಟ್ಟಿಯ ವಿ
ಡಿಸಿ


ವಿಜಯಪುರ, 08 ಅಕ್ಟೋಬರ್ (ಹಿ.ಸ.) :

ಆ್ಯಂಕರ್ :

ಭಾರತ ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ಭಾರತ ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯ ಪರಿಷ್ಕರಣೆ, ವಿಶೇಷ ಪರಿಷ್ಕರಣೆ ಮತ್ತು ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಜರುಗಿಸಿ, ಮತದಾರರ ಪಟ್ಟಿಯಲ್ಲಿನ ಅನರ್ಹರ ಹೆಸರುಗಳನ್ನು ತೆಗೆಯುವ ಮತ್ತು ಅರ್ಹ ಮತದಾರರ ಹೆಸರುಗಳನ್ನು ಸೆರ್ಪಡೆ ಮಾಡಲಾಗುತ್ತದೆ. ಅದರಂತೆ ರಾಷ್ಟ್ರೀಯ ಚುನಾವಣಾ ಆಯೋಗವು ಪ್ರಸ್ತುತದಲ್ಲಿರುವ ಮತದಾರರ ಪಟ್ಟಿಯನ್ನು ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ಹೊಸ ಮತದಾರರ ಪಟ್ಟಿಯನ್ನು ತಯಾರಿಸಲು ಕ್ರಮವಹಿಸಲಾಗುವುದೆಂದು ತಿಳಿಸಿದರು.

ರಾಜ್ಯ ಶಾಸಕಾಂಗ ಮತ್ತು ಸಂಸತ್ತಿಗೆ ನಿಯತಕಾಲಿಕವಾಗಿ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದಾಗಲೆಲ್ಲಾ, ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ. ಹಿಂದಿನ ಮತದಾರರ ಪಟ್ಟಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗುತ್ತದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಪ್ರತಿ ಮತಗಟ್ಟೆ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ಮನೆಮನೆ ಭೇಟಿ ಮೂಲಕ ಮತಗಟ್ಟೆ ಮಟ್ಟದ ಅಧಿಕಾರಿಗಳು ಪರಿಷ್ಕರಿಸಲಿದ್ದು, ವಿವಿಧ ರಾಜಕೀಯ ಪಕ್ಷದವರು ಮತಗಟ್ಟೆ ಮಟ್ಟದಲ್ಲಿ ನೇಮಿಸುವ ಬಿಎಲ್‍ಎಗಳ ಸಹಕಾರ ಅಗತ್ಯವಾಗಿದೆ ಎಂದರು.

ಯಾವುದೇ ವ್ಯಕ್ತಿಯ ಹೆಸರು 2002ರ ಮತದಾರರ ಪಟ್ಟಿಯಲ್ಲಿ ದಾಖಲಾಗಿದ್ದರೆ, ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವುದಕ್ಕಾಗಿ, ಮತದಾರರಾಗಿ ಅವರ ಅರ್ಹತೆಯನ್ನು ಸುಸ್ಥಾಪಿಸುವದಕ್ಕೆ ನಿಗದಿಪಡಿಸಲಾದ ವ್ಯಾಪಕ ಪ್ರಮಾಣದ ಅರ್ಹ ಸರ್ಕಾರಿ ದಸ್ತಾವೇಜುಗಳ ಪೈಕಿ ಯಾವುದನ್ನಾದರೂ ಸಲ್ಲಿಸಬೇಕಾಗುತ್ತದೆ. ಅಲ್ಲದೇ ಹೊಸ ಮತದಾರನಾಗಿ ಅಥವಾ ಬಿಹಾರ ರಾಜ್ಯದ ಹೊರಗಿನಿಂದ ಸ್ಥಳಾಂತರಗೊಂಡ ಮತದಾರನಾಗಿ ನೋಂದಾಯಿಸಿಕೊಳ್ಳುವ ಅರ್ಜಿಯ ಸಂದರ್ಭದಲ್ಲಿ ಇನ್ನು ಮುಂದೆ ಅರ್ಜಿದಾರನು ನಮೂನೆ 6, ನಮೂನೆ 8 ರೊಂದಿಗೆ ಅದರಲ್ಲಿ ಮಾಡಲಾಗಿರುವ ಘೋಷಣೆಗೆ ಬೆಂಬಲವಾಗಿ ಹೆಚ್ಚುವರಿ ಘೋಷಣಾ ನಮೂನೆ ಅನುಬಂಧ ಡಿಯನ್ನು ಸಹ ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆಂದೂ ಕೂಡ ನಿರ್ದೇಶಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕೈಪಿಡಿಯನ್ನು ವಿವಿಧ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ರಾಜಕೀಯ ಪ್ರತಿನಿಧಿಗಳಾದ ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ ಬಳ್ಳಾರಿ, ರಾಜು ಮನ್ನಿಕೇರಿ, ಬಿಜೆಪಿ ಪಕ್ಷದಿಂದ ಮಲ್ಲಿಕಾರ್ಜುನ ಕಾಂಬಳೆ, ಬಿಎಸ್‍ಪಿ ಪಕ್ಷದಿಂದ ಯಮನಪ್ಪ ಶಿರೂರ, ಆನಂದ ದೇವಾಡಿಗ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande