
ಹೊಸಪೇಟೆ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ನಗರದ ಗ್ರಾಮೀಣ ಉಪವಿಭಾಗದಲ್ಲಿ ನವೆಂಬರ್.15 ರಂದು ಮದ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ. ಹೊಸಪೇಟೆ ತಾಲೂಕಿನ ವಿದ್ಯುತ್ ಗ್ರಾಹಕರು (ಹೊಸಪೇಟೆ ನಗರ ಹೊರತು ಪಡಿಸಿ) ಸಭೆಗೆ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪವಿಭಾಗ ಸಹಾಯಕ ಕಾರ್ಯನಿರ್ವಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್