
ಬಳ್ಳಾರಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ನಗರದ ಗಡಿಗಿ ಚೆನ್ನಪ್ಪ ವೃತ್ತದಿಂದ ರೈಲ್ವೆ ಕೆಳಸೇತುವೆ ರಸ್ತೆಯ ವರೆಗೆ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿ ಮುಕ್ತಾಯಗೊಂಡಿದ್ದು, ನಾಳೆಯಿಂದ ನಗರ ಸಾರಿಗೆ ಬಸ್ ನಿಲ್ದಾಣದ (ಹಳೇ ಬಸ್ ನಿಲ್ದಾಣ) ಮೂಲಕ ಬಸ್ ಗಳು ಸಂಚರಿಸಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಎಲ್ಲಾ ಗ್ರಾಮಾಂತರ ಹಾಗೂ ಹೊಸಪೇಟೆ, ಗಂಗಾವತಿ, ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಸಂಡೂರು ಮಾರ್ಗದ ಬಸ್ಗಳು ಪುನಃ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್