


ರಾಯಚೂರು/ಬಳ್ಳಾರಿ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಮೇರಾ ಯುವ ಭಾರತ, ರಾಷ್ಟಿಯ ಸೇವಾ ಯೋಜನೆ, ರೋಟರಿ ಕ್ಲಬ್ ಕೃಷ್ಣ ತುಂಗೆ, ಎನ್ಸಿಸಿ ಮತ್ತು ಭಾರತ ಸೇವಾ ದಳದ ಸಂಯುಕ್ತಾಶ್ರಯದಲ್ಲಿ ರಾಯಚೂರು ನಗರದಲ್ಲಿ ಜಿಲ್ಲಾಮಟ್ಟದ ಏಕತಾ ಯಾತ್ರೆ ಶಿಸ್ತುಬದ್ಧವಾಗಿ ನಡೆಯಿತು.
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ನಿಮಿತ್ತ ನಡೆದ ಜಿಲ್ಲಾ ಮಟ್ಟದ ಏಕತಾ ಕಾಲ್ನಡಿಗೆ ಯಾತ್ರೆಯು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಿ0ದ ಆರಂಭವಾಗಿ, ಶ್ರೀಬಸವೇಶ್ವರ ವೃತ್ತ, ಗಾಂಧಿ ಚೌಕ್, ಚಂದ್ರಮೌಳೇಶ್ವರ ಸರ್ಕಲ್ ವೃತ್ತದ ಮೂಲಕ ಸಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತಕ್ಕೆ ಬಂದು ಮುಕ್ತಾಯವಾಯಿತು.
ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ ದೇಶದ ಏಕೀಕರಣದ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಪ್ರೇಮ, ಸಂಘಟನಾತ್ಮಕ ಗುಣಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಆಗಿರುವ ರೋಟರಿ ಕ್ಲಬ್ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ, ಭಾರತ ಸೇವಾದಳದ ತಾಲೂಕಾಧ್ಯಕ್ಷರಾದ ವಿರುಪಾಕ್ಷಪ್ಪ ಕ್ಯಾದಿಗೇರಿ, ಮುಖಂಡರಾದ ವೀರನಗೌಡ ಪಾಟೀಲ, ಯು ನರಸರೆಡ್ಡಿ, ಶಂಕರರೆಡ್ಡಿ, ಸಂತೋಷ ರಾಜಗುರು, ಗೌತಮ ರೆಡ್ಡಿ, ವಿಜಯಕುಮಾರ ಸಜ್ಜನ, ವಿದ್ಯಾಸಾಗರ ಚಿಮಣಗೇರಿ ಸೇರಿದಂತೆ ಇತರರು ಇದ್ದರು.
ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್