ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೊಳಿಸಿ : ಸಿದ್ದಪ್ಪ ಲಿಂಗದಾಳ
ಗದಗ, 22 ನವೆಂಬರ್ (ಹಿ.ಸ.) : ಆ್ಯಂಕರ್ : ಕುಷ್ಟರೋಗವು ಮೈಕೋ ಬ್ಯಾಕ್ಟೀರಿಯಮ್ ಲೆಫ್ರಿ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು ಮುಖ್ಯವಾಗಿ ಇದು ಚರ್ಮ ಹಾಗೂ ನರಗಳಿಗೆ ಸಂಬಂಧಿಸಿದ ರೋಗವಾಗಿದ್ದು ಇದನ್ನು ಎಮ್ ಡಿಟಿ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಇದೇ ತಿಂಗಳು 24 ರಿಂದ ಡಿ
ಫೋಟೋ


ಗದಗ, 22 ನವೆಂಬರ್ (ಹಿ.ಸ.) :

ಆ್ಯಂಕರ್ : ಕುಷ್ಟರೋಗವು ಮೈಕೋ ಬ್ಯಾಕ್ಟೀರಿಯಮ್ ಲೆಫ್ರಿ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು ಮುಖ್ಯವಾಗಿ ಇದು ಚರ್ಮ ಹಾಗೂ ನರಗಳಿಗೆ ಸಂಬಂಧಿಸಿದ ರೋಗವಾಗಿದ್ದು ಇದನ್ನು ಎಮ್ ಡಿಟಿ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಇದೇ ತಿಂಗಳು 24 ರಿಂದ ಡಿಸೆಂಬರ್ 9ರವರೆಗೆ ನಡೆಯಲಿರುವ ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿದ್ದಪ್ಪ ಎನ್ ಲಿಂಗದಾಳ ಸಮೀಕ್ಷಣಾ ತಂಡಕ್ಕೆ ಸೂಚಿಸಿದರು

ಅವರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕುಷ್ಟರೋಗ ವಿಭಾಗ ಗದಗ,ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಪ್ರಾಥಮಿಕ ಆರೋಗ್ಯ ಕೇಂದ್ರ ಲಕ್ಕುಂಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಡವಿಸೋಮಾಪೂರ ಲಕ್ಕುಂಡಿ ಮತ್ತು ಹಾತಲಗೇರಿ ಗ್ರಾಮದಲ್ಲಿ ಇದೆ 24 ರಿಂದ ಡಿಸೆಂಬರ್ 9ರವರೆಗೆ ನಡೆಯಲಿರುವ ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನದ ಪೂರ್ವಭಾವಿ ಸಭೆ ಹಾಗೂ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿ ದಿನ ಬೆಳಿಗ್ಗೆ 8. ಘಂಟೆಗೆ ಸಮೀಕ್ಷಾ ತಪಾಶಣೆ ಕಾರ್ಯಕ್ರವನ್ನು ಆರಂಭಿಸಿ ಪ್ರತಿದಿನ 20 ಮನೆಗಳ ವರದಿಯನ್ನು ಮೇಲ್ವಿಚಾರಕರಿಗೆ 1 ಘಂಟೆಯ ಒಳಗಾಗಿ ತಲುಪಿಸಬೇಕು, ಪ್ರತಿಯೋಬ್ಬರಿಗೂ ಕುಷ್ಠರೋಗದ ಬಗ್ಗೆ ಅರಿವನ್ನು ಮೂಡಿಸುವಲ್ಲಿ ಗುಂಪುಸಭೆ ನಡೆಸಿರಿ, ದೇಹದ ಯಾವುದೇ ಭಾಗದಲ್ಲಿ ತಿಳಿ ಬಿಳಿ ತಾಮ್ರ ವರ್ಣದ ಸ್ಪರ್ಶಜ್ಞಾನ ಇಲ್ಲದೆ ಇರುವ ತದ್ದು ಮಚ್ಚೆಗಳು ಇದ್ದರೆ ಅಥವಾ ಮುಖದಲ್ಲಿ ಎಣ್ಣೆಮಿಂಚು ಸಿಂಹದ ಮುಖ ಕಣ್ಣಿನ ರೆಪ್ಪೇಗಳು ಉದುರಿದ್ದರೆ ಅವು ಕುಷ್ಠರೋಗದ ಲಕ್ಷಣ ಇರಬಹು ಈ ಬಗ್ಗೆ ಪ್ರತಿಯೊಂದು ಮನೆಯವರಿಗೆ ಅರಿವನ್ನು ಮೂಡಿಸಬೇಕೆಂದು ಹೇಳಿದರು

ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮುತ್ತಪ್ಪ ಹಟ್ಟಿಮನಿ ಮಾತನಾಡಿ ಕುಷ್ಟರೋಗವನ್ನು ಮುಖ್ಯವಾಗಿ ದೇಹದ ಯಾವುದೇ ಭಾಗದಲ್ಲಿ ಕಂಡುಬರುವ ತಿಳಿ ಬಳಿ ಅಥವಾ ತಾಮ್ರ ಬಣ್ಣದ ಸ್ಪರ್ಶಜ್ಞಾನ ಇಲ್ಲದೆ ಇರುವ ಮಚ್ಚೆಗಳು ಮತ್ತು ಚರ್ಮ, ಕಿವಿಯ ಹಾಲೆ ಮುಖ ಮತ್ತು ಕೈಕಾಲುಗಳ ಮೇಲೆ ಕಂಡುಬರುವ ಗಂಟುಗಳು , ಊದಿಕೊಂಡ ನರಗಳು ಇವುಗಳ ಪರೀಕ್ಷೆ ಮಾಡಿ ಯಾರಲ್ಲಿ ಲಕ್ಷಣಗಳು ಕಂಡುಬಂದರೆ ಮಾಹಿತಿಯನ್ನು ನೀಡಿ ಸಹಕರಿಸಬೇಕು ಹೇಳಿದರು

ಅಧ್ಯಕ್ಷತೆಯನ್ನು ವೈದ್ಯಾಧಿಕಾರಿಗಳಾದ ಡಾ.ವರ್ಷಾ ಬ್ಯಾಲಿಹಾಳ ವಹಿಸಿದ್ದರು. ಜಿಮ್ಸ್ ವೈದ್ಯರು ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಸ್.ಬಿ.ಗಡಾದ ವೈ ಎನ್ ಕಡೆಮನಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಹುಲಿಗೇಮ್ಮ ಮಾದರ ಚಂದ್ರಪ್ರಭಾ ತೋಟದ ಗಂಗಮ್ಮ ಕುಂಬಾರ ಸಲ್ಮಾ ಕುಕನೂರ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಗಾಯತ್ರಿ ಬಡಿಗೇರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande