
ಕಿಶ್ತ್ವಾರ್, 05 ನವೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಉಪವಿಭಾಗದ ನೈದ್ಗಾಮ್ನ ಕಲಾಬನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಒಬ್ಬ ಸೇನಾ ಜವಾನ್ ಗಾಯಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ನಡೆದ ಈ ಘಟನೆಯಲ್ಲಿ ಗಾಯಗೊಂಡ ಸೈನಿಕರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿಕೊಂಡಿರುವ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.
ಇದಕ್ಕೂ ಮೊದಲು, ವೈಟ್ ನೈಟ್ ಕಾರ್ಪ್ಸ್ ತನ್ನ ಅಧಿಕೃತ ಎಕ್ಸ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿಯಾಗಿ ನಡೆದ ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಯಲ್ಲಿ, ವೈಟ್ ನೈಟ್ ಕಾರ್ಪ್ಸ್ ಪಡೆಗಳು ಛಾತ್ರೂ ಪ್ರದೇಶದಲ್ಲಿ ಭಯೋತ್ಪಾದಕರನ್ನು ಎದುರಿಸುತ್ತಿವೆ. ಗುಂಡಿನ ಚಕಮಕಿ ಆರಂಭವಾಗಿದೆ ಮತ್ತು ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿತ್ತು.
ಈ ಘಟನೆ ನಂತರ ಕಿಶ್ತ್ವಾರ್ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಯೋತ್ಪಾದಕರ ನಿಷ್ಕ್ರಿಯಗೊಳಿಸಲು ಸೇನೆ ಮತ್ತು ಪೊಲೀಸರು ಸಂಯುಕ್ತ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa