ಶಸ್ರಚಿಕಿತ್ಸೆ ಹೆರಿಗೆ ಪ್ರಮಾಣ ಹೆಚ್ಚಳ ; ಜಿಲ್ಲಾಧಿಕಾರಿ ಅಸಮಧಾನ
ಶಸ್ರಚಿಕಿತ್ಸೆ ಹೆರಿಗೆ ಪ್ರಮಾಣ ಹೆಚ್ಚಳ ಜಿಲ್ಲಾಧಿಕಾರಿ ಅಸಮಧಾನ
ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಮಾತನಾಡಿದರು.


ಕೋಲಾರ, 0೫ ನವೆಂಬರ್ (ಹಿ.ಸ.) :

ಆಂಕರ್ : ತಾಯಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮಗಳಡಿ ಜಿಲ್ಲೆಯಲ್ಲಿ ಸಂಪೂರ್ಣ ಲಸಿಕಾಕರಣ ಶೇ. ೯೫ರಷ್ಟು ಸಾಧನೆಯೊಂದಿಗೆ ಉತ್ತಮ ಪ್ರಗತಿ ಕಂಡು ಬಂದಿದ್ದರೂ, ಒಟ್ಟು ಹೆರಿಗೆಗಳಲ್ಲಿ ಸಿ-ಸೆಕ್ಷನ್ (ಶಸ್ರಚಿಕಿತ್ಸೆ ಮೂಲಕ ಹೆರಿಗೆ) ಪ್ರಮಾಣ ಶೇ. ೫೬ಕ್ಕೆ ಏರಿರುವುದು ಗಂಭೀರ ಕಳವಳಕಾರಿ ವಿಷಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಕಳವಳ ವ್ಯಕ್ತಪಡಿಸಿದರು.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಯು ಮಂಡಿಸಿದ ವರದಿಯನ್ನು ಪರಿಶೀಲಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ೧೭.೫೪ ಲಕ್ಷ ಅಂದಾಜು ಜನಸಂಖ್ಯೆ ಇದ್ದು, ಪ್ರಸ್ತುತ ೧೦ ’ನಮ್ಮ ಕ್ಲಿನಿಕ್’ಗಳು ಸೇರಿದಂತೆ ೭೮ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ತಾಯಿ ಮತ್ತು ಶಿಶು ಆರೋಗ್ಯ: ಏಪ್ರಿಲ್ನಿಂದ ಸೆಪ್ಟೆಂಬರ್ ೨೦೨೫ರ ಅವಧಿಯಲ್ಲಿ ಗರ್ಭಿಣಿಯರ ನೋಂದಣಿ ಶೇ. ೯೨ರಷ್ಟಾಗಿದೆ. ಸಂಪೂರ್ಣ ನಾಲ್ಕು ಎಎನ್ಸಿ ತಪಾಸಣೆಗಳನ್ನು ಶೇ. ೯೧ರಷ್ಟು ತಾಯಂದಿರು ಪಡೆದಿದ್ದಾರೆ.

ಜಿಲ್ಲೆಯಲ್ಲಿ ಸಂಪೂರ್ಣ ಲಸಿಕಾಕರಣದ ಗುರಿ ಶೇ. ೯೫ರಷ್ಟು ಸಾಧನೆಯಾಗಿದೆ. ಶಿಶು ನೋಂದಣಿಯಲ್ಲಿ ಕೋಲಾರ ತಾಲ್ಲೂಕು ಶೇ. ೧೦೭ರಷ್ಟು ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.

ಜಿಲ್ಲೆಯ ಶಿಶು ಮರಣ ದರ (Iಒಖ) ಪ್ರತಿ ೧,೦೦೦ ಜೀವಂತ ಜನನಗಳಿಗೆ ೧೦ರಷ್ಟಿದ್ದು, ತಾಯಂದಿರ ಮರಣ ದರ (ಒಒಖ) ಪ್ರತಿ ೧,೦೦,೦೦೦ ಜೀವಂತ ಜನನಗಳಿಗೆ ೨೪ರಷ್ಟಿದೆ. ಈ ಅಂಕಿಅಂಶಗಳನ್ನು ಮತ್ತಷ್ಟು ಕಡಿಮೆ ಮಾಡಲು ಕ್ರಮವಹಿಸಲು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು ಹೆರಿಗೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. ೫೬ರಷ್ಟು ಸಿ-ಸೆಕ್ಷನ್ಗಳು ಆಗಿವೆ. ಇದು ಅತ್ಯಂತ ಆತಂಕಕಾರಿ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಈ ಪ್ರಮಾಣ ಶೇ. ೭೩ರಷ್ಟಿ ರುವುದು ಕಳವಳಕಾರಿ. ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. ೪೨ರಷ್ಟಿದೆ. ಕೋಲಾರ ತಾಲ್ಲೂಕು ಶೇ. ೬೬ರಷ್ಟು ಅತಿ ಹೆಚ್ಚು ಸಿ-ಸೆಕ್ಷನ್

ಪ್ರಮಾಣವನ್ನು ದಾಖಲಿಸಿದೆ, ಎಂದು ಹೇಳಿದರು.

ಶಸ್ತ್ರಚಿಕಿತ್ಸೆ ಅಗತ್ಯವಿದ್ದಾಗ ಮಾತ್ರ ಸಿ-ಸೆಕ್ಷನ್ ಮಾಡಬೇಕು. ಅನಗತ್ಯ ಸಿ-ಸೆಕ್ಷನ್ಗಳನ್ನು ತಡೆಗಟ್ಟಲು ಎಲ್ಲ ಆಸ್ಪತ್ರೆಗಳು, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳು, ವೈಜ್ಞಾನಿಕ ಮತ್ತು ವೈದ್ಯಕೀಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಕೂಡಲೇ ಸೂಕ್ತ ಪರಿಶೀಲನಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಜನವರಿಯಿಂದ ಸೆಪ್ಟೆಂಬರ್ವರೆಗೆ ಡೆಂಗ್ಯೂನ ೯೯ ಪ್ರಕರಣಗಳು ಮತ್ತು ಚಿಕ್ಕನ್ಗುನ್ಯಾದ ೧೧ ಪ್ರಕರಣಗಳು ದೃಢಪಟ್ಟಿವೆ. ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಯಿತು. ಜಿಲ್ಲೆಯಲ್ಲಿ ಈ ಅವಧಿಯಲ್ಲಿ ೯,೦೭೬ ನಾಯಿ ಕಡಿತ ಮತ್ತು ೨೩೨ ಹಾವು ಕಡಿತ ಪ್ರಕರಣಗಳು ವರದಿಯಾಗಿವೆ. ಇಂತಹ ಪ್ರಕರಣಗಳ ನಿರ್ವಹಣೆ ಮತ್ತು ಲಸಿಕೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವಂತೆ ಅವರು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು.

ಇದೆ ಸಂದರ್ಭದಲ್ಲಿ ತಂಬಾಕು ಪರಿಣಾಮ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಶಸ್ತ್ರಚಿಕಿತ್ಸೆಕರಾದ ಡಾ. ಜಗದೀಶ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಚಾರಿಣಿ, ಜಿಲ್ಲಾಮಲೇರಿಯಾ ನಿಯಂತ್ರಣ ಅಧಿಕಾರಿಗಳಾದ ಡಾ|| ರವಿ ಕುಮಾರ್ ಎಂ.ವಿ,ಜಿಲ್ಲಾಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ|| ಪ್ರಸನ್ನ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ|| ನಾರಯಣ ಸ್ವಾಮಿ, ಡಾ|| ರಮೇಶ್ ಬಾಬು, ಡಾ|| ಸುನೀಲ್, ಡಾ|| ಸುಗುಣ, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಗಳಾದ ವೆಂಕಟಾ ಚಲಪತಿಎಸ್, ಕೆ.ಎಸ್.ಆರ್.ಟಿ.ಸಿ ಆಡಳಿತಾಧಿಕಾರಿಗಳಾದ ಭಾಗ್ಯಲಕ್ಷ್ಮೀ ಎಂ.ವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ

ಮಹಮದ್ ಪಿ ಸೇರಿದಂತೆ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande