
ವಿಜಯಪುರ, 07 ನವೆಂಬರ್ (ಹಿ.ಸ.) :
ವಿಜಯಪುರ : ರಸ್ತೆ ದಾಟುವಾಗ ಯುವಕನಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿರುವ ಪರಿಣಾಮ ಯುವಕ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ಜೆಎಸ್ಎಸ್ ಆಸ್ಪತ್ರೆ ಬಳಿ ನಡೆದಿದೆ.
ರಾಹುಲ ಭೂತನಾಳ (23) ಮೃತಪಟ್ಟಿರುವ ಯುವಕ. ಇನ್ನು ಗೂಡ್ಸ್ ವಾಹನ ನಂಬರ KA 33, 7672 ಡಿಕ್ಕಿಯಾಗಿದೆ. ಅಪಘಾತದ ಬಳಿಕ ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande