
ನವದೆಹಲಿ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸಂದೇಶ ಬಿಡುಗಡೆ ಮಾಡಿರುವ ಅವರು, ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa