ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಶೀತ ಮತ್ತು ದಟ್ಟ ಮಂಜಿನ ತೀವ್ರತೆ
ನವದೆಹಲಿ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶದ ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾನುವಾರ ದಟ್ಟವಾದ ಮಂಜು ಆವರಿಸಿದ್ದು, ಮುಂದಿನ ದಿನಗಳಲ್ಲಿ ಶೀತ ಹಾಗೂ ಮಂಜಿನ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಮಾಹಿ
Alert


ನವದೆಹಲಿ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೇಶದ ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾನುವಾರ ದಟ್ಟವಾದ ಮಂಜು ಆವರಿಸಿದ್ದು, ಮುಂದಿನ ದಿನಗಳಲ್ಲಿ ಶೀತ ಹಾಗೂ ಮಂಜಿನ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಡಿಸೆಂಬರ್ 15–16ರಂದು ತೆಲಂಗಾಣ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಶೀತ ಅಲೆ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ಇದೇ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ, ಡಿಸೆಂಬರ್ 15–19ರಂದು ಈಶಾನ್ಯ ಭಾರತದಲ್ಲಿ, ಡಿಸೆಂಬರ್ 15–17ರಂದು ಹಿಮಾಚಲ ಪ್ರದೇಶದಲ್ಲಿ ಹಾಗೂ ಡಿಸೆಂಬರ್ 15–16ರಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಈಶಾನ್ಯ ಮಧ್ಯಪ್ರದೇಶದಲ್ಲಿ ಬೆಳಿಗ್ಗೆ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ.

ಡಿಸೆಂಬರ್ 15ರಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರದೇಶಗಳಲ್ಲಿ ಹಗುರ ಮಳೆ ಮತ್ತು ಹಿಮಪಾತ ಸಂಭವಿಸುವ ಸಾಧ್ಯತೆ ಇದ್ದು, ಡಿಸೆಂಬರ್ 17ರ ರಾತ್ರಿ ಮತ್ತೊಂದು ದುರ್ಬಲ ಪಶ್ಚಿಮ ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ಡಿಸೆಂಬರ್ 18–19ರಂದು ಮತ್ತೆ ಹಗುರ ಮಳೆ ಮತ್ತು ಹಿಮಪಾತ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ 14ರಿಂದ 18ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಗಂಟೆಗೆ 30–40 ಕಿ.ಮೀ ವೇಗದ ಬಲವಾದ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಮುಂದಿನ ಕೆಲ ದಿನಗಳಲ್ಲಿ ತೀವ್ರ ಶೀತ ಮತ್ತು ಬೆಳಗಿನ ದಟ್ಟ ಮಂಜು ಮುಂದುವರಿಯಲಿದೆ.

ಡಿಸೆಂಬರ್ 14–17ರ ಅವಧಿಯಲ್ಲಿ ಉತ್ತರ ಭಾರತದಲ್ಲಿ ದಟ್ಟ ಮಂಜು ಹಾಗೂ ದಕ್ಷಿಣ ಭಾರತದಲ್ಲಿ ಶೀತ ಅಲೆ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಕೆಲ ಭಾಗಗಳಲ್ಲಿ ಅತ್ಯಂತ ದಟ್ಟ ಮಂಜು ಆವರಿಸಿದ್ದು, ಗೋಚರತೆ 50 ಮೀಟರ್‌ಗಿಂತಲೂ ಕಡಿಮೆ ಮಟ್ಟಕ್ಕೆ ಇಳಿದಿದೆ. ಪಶ್ಚಿಮ ಉತ್ತರ ಪ್ರದೇಶದ ಆಗ್ರಾ ಹಾಗೂ ಪೂರ್ವ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರಗಳಲ್ಲಿ ಗೋಚರತೆ ಶೂನ್ಯದಿಂದ 50 ಮೀಟರ್‌ವರೆಗೆ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದ ಬಯಲು ಪ್ರದೇಶಗಳಲ್ಲಿನ ಅತೀ ಕಡಿಮೆ ತಾಪಮಾನವನ್ನು ಪಶ್ಚಿಮ ಮಧ್ಯಪ್ರದೇಶದ ರಾಜ್‌ಗಢ ಮತ್ತು ಛತ್ತೀಸ್‌ಗಢದ ಅಂಬಿಕಾಪುರದಲ್ಲಿ 5.6 ಡಿಗ್ರಿ ಸೆಲ್ಸಿಯಸ್ ಎಂದು ದಾಖಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಕನಿಷ್ಠ ತಾಪಮಾನ 5°C ರಿಂದ 10°C ನಡುವೆ ದಾಖಲಾಗಿದೆ.

ಮುಂದಿನ ಏಳು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಸಂಭವಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಡಿಸೆಂಬರ್ 14–17ರ ಅವಧಿಯಲ್ಲಿ ಮನ್ನಾರ್ ಕೊಲ್ಲಿ ಮತ್ತು ಸಮೀಪದ ಕೊಮೊರಿನ್ ಪ್ರದೇಶಕ್ಕೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande