ಯೋಜನೆಗಳ ಸದುಪಯೋಗಕ್ಕೆ ಮನವಿ
ಧಾರವಾಡ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ. ಇಲಾಖೆಯಿಂದ ವಿಶೇಷ ಚೇತನ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿ ರಹಿತ ವಿಶೇಷ ಶಾಲೆ
ಯೋಜನೆಗಳ ಸದುಪಯೋಗಕ್ಕೆ ಮನವಿ


ಧಾರವಾಡ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ.

ಇಲಾಖೆಯಿಂದ ವಿಶೇಷ ಚೇತನ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿ ರಹಿತ ವಿಶೇಷ ಶಾಲೆಗಳು, 1982 ರ ಅನುದಾನ ಸಂಹಿತೆಯಡಿ ವಸತಿರಹಿತ ವಿಶೇಷ ಶಾಲೆಗಳು, ವಿಕಲಚೇತನ ಉದ್ಯೋಗಸ್ಥ ಮಹಿಳೆಯರಿಗಾಗಿ ಹಾಗೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯಗಳು, ಹಿರಿಯ ನಾಗರಿಕರಿಗಾಗಿ ವೃದ್ದಾಶ್ರಮ ಕೇಂದ್ರಗಳು ಹಾಗೂ ಹಗಲು ಯೋಗಕ್ಷೇಮ ಕೇಂದ್ರಗಳು, ಹಿರಿಯ ನಾಗರಿಕರಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಪರಿಹರಿಸಲು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಈ ಸೌಲಭ್ಯವನ್ನು ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಸದುಪಯೋಗಪಡಿಸಿಕೊಳ್ಳಲು ಧಾರವಾಡ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande