ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆ
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆ
ಚಿತ್ರ : ಕೋಲಾರ ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿದರು.


ಚಿತ್ರ : ಕೋಲಾರ ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿದರು.


ಕೋಲಾರ, ೧೭ಡಿಸೆಂಬರ್ (ಹಿ.ಸ) :

ಆ್ಯಂಕರ್ : ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ರೂಪಿಸಿರುವ ಹಲವಾರು ಯೋಜನೆಗಳು ಎಲ್ಲಾ ಜನಸಾಮಾನ್ಯರನ್ನು ತಲುಪುವಂತಾಗಲು ಅಗತ್ಯ ಪ್ರಚಾರ ಕೈಗೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಯೋಜನೆಯ ಮಾಹಿತಿ ತಲುಪಿಸಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಿ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದರು.

ಕೋಲಾರ ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಎಲ್ಲಾ ಸಂಬಂಧಿತ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ಕೈಗಾರಿಕಾ ತರಬೇತಿ ಸಂಸ್ಥೆಗಳು ಹಾಗೂ ಜಿ.ಟಿ.ಟಿ.ಸಿ ಸಂಸ್ಥೆಗಳಲ್ಲಿ ಆಯೋಜಿಸಲಾಗುವ ತರಬೇತಿಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಹಾಗೂ ಪ್ರಸಕ್ತ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾದ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡುವಂತೆ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸೂಚಿಸಿದರು.

ಸ್ಕಿಲ್ ಅಟ್ ಸೂಲ್ಕ್ ಕಾರ್ಯಕ್ರಮದಡಿ ಕೋಲಾರ ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯಾ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ನೀಡಲು ಹಾಗೂ ವಿದ್ಯಾರ್ಥಿ ಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಚಿಸಿದ ಅವರು, ಹೆಚ್ಚಿನ ಪ್ರಚಾರದೊಂದಿಗೆ ಸಮಾಜಕ್ಕೆ ತಲುಪಿಸಿ ಎಮದರು.

ಉನ್ನತ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ರೂಪಿಸಲಾಗಿರುವ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೇವಲ ತಾತ್ವಿಕವಾಗಿ ಬೋಧಿಸಿವುದಲ್ಲದೇ ಪ್ರಾಯೋಗಿಕವಾಗಿ ಕಲಿಯಲು ಹೆಚ್ಚು ಒತ್ತನ್ನು ನೀಡಬೇಕೆಂದು ತಿಳಿಸಿದರು.

ನನ್ನ ವೃತ್ತಿ ನನ್ನ ಆಯ್ಕೆ ಕೌಶಲ್ಯ ತರಬೇತಿ ಕುರಿತು ಪರಿಶೀಲನೆ ನಡೆಸಿ ಯೋಜನೆಯನ್ನು ಇನ್ನು ಹೆಚ್ಚಿನ ವಿದ್ಯಾಸಂಸ್ಥೆಗಳಿಗೆ ವಿಸ್ತರಿಸಲು ಸೂಚಿಸಿದ ಅವರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಾರಿಗೊಳಿಸಲಾದ ನೂತನ ಯೋಜನೆಗಳಾದ ಶುಶ್ರೂಷಕರ ವಿದೇಶಿ ಭಾಷಾ ತರಬೇತಿ, ವಿದೇಶದಲ್ಲಿ ಅಧ್ಯಯನ, ವಿಶ್ವ ಕೌಶಲ್ಯ ಸ್ವರ್ಧೆ, ಹಾಗೂ ಪ್ರಾದೇಶಿಕ ಹಾಗೂ ಪಾರಂಪರಿಕ ಕೌಶಲ್ಯಗಳ ತರಬೇತಿ ಕುರಿತು ಪರಿಶೀಲನೆ ನಡೆಸಿ ಯೋಜನೆಯ ಕುರಿತಾದ ಮಾಹಿತಿ ಎಲ್ಲರನ್ನು ತಲುಪುವಂತಾಗಲು ಇನ್ನು ಹೆಚ್ಚಿನ ಪ್ರಚಾರದ ಅಗತ್ಯತೆ ಇದೆ ಎಂದು ತಿಳಿಸಿದರು.

ಸಿಡಾಕ್ ಸಂಸ್ಥೆಯ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳಲ್ಲಿ ವೈವಿಧ್ಯಮಯ ವಸ್ತುಗಳ ತಯಾರಿಕೆ ಹಾಗೂ ಪ್ಯಾಕೇಜಿಂಗ್ ಬಗ್ಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದರು.

ನಲ್ಜಲ್ ಮಿತ್ರ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ತಮ ತರಬೇತಿ ನೀಡಿ ಅವರನ್ನು ನುರಿತ ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸಿ ಗ್ರಾಮೀಣ ಪರಿಸರದಲ್ಲಿ ಉತ್ತಮ ರೀತಿ ಕಾರ್ಯನಿರ್ವಹಿಸುವಂತಾಗಲು ಅಗತ್ಯ ಕ್ರಮ ವಹಿಸಿವಂತೆ ತಿಳಿಸಿದರು.

ಯುವನಿಧಿ ಹಾಗೂ ಯುವನಿಧಿ ಪ್ಲಸ್ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲ್ಯಗಳನ್ನು ಯುವಕರಿಗೆ ಕಲಿಸಿ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ತಿಳಿಸಿದರು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ನೀಡಿ ಯೋಜನೆಯ ಪ್ರಯೋಜನ ಗರಿಷ್ಟ ಫಲಾನುಭವಿಗಳಿಗೆ ತಲುಪಲು ಕ್ರಮ ವಹಿಸುವಂತೆ ತಿಳಿಸಿದರು.

ಡೇನಲ್ಮ್ ಯೋಜನೆಯ ಪ್ರಧಾನ ಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸುವಂತೆ ಹಾಗೂ ಪಿ.ಎಂ ಸ್ವನಿಧಿ ಯೋಜನೆಯ ಉಪಯೋಗ ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ತಲುಪುವಂತೆ ಹಾಗೂ ವ್ಯಾಪಾರ ವಲಯಗಳನ್ನು ನಗರ ಪ್ರದೇಶಗಳಲ್ಲಿ ನಿರ್ಮಿಸಲು ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.

ಪಿ.ಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಅವಲಂಬಿತರಿಗೆ ವಿವಿಧ ಇಲಾಖೆಗಳ ಸಾಮಾಜಿಕ ಹಾಗೂ ಆರ್ಥಿಕ ಯೋಜನೆಗಳನ್ನು ಶೇ. ೧೦೦ ರಷ್ಟು ತಲುಪಿಸುವಂತೆ ತಿಳಿಸಿದರು.

ನಗರದ ವಸತಿ ರಹಿತರಿಗೆ ಆಶ್ರಯ ತಾಣ ಒದಗಿಸುವ ಯೋಜನೆಯಡಿ ರಾತ್ರಿ ವೇಳೆ ಸಮೀಕ್ಷೆ ನಡೆಸಿ ವಸತಿ ರಹಿತರನ್ನು ಗುರುತಿಸಿ ಅವರಿಗೆ ಅವಶ್ಯಕ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ಮಂಗಳ ಮಾತನಾಡಿ, ಕೌಶಲ್ಯ ಅಭಿವೃದ್ಧಿ ತರಬೇತಿಗಳು ಇಂದಿನ ಯುವಜನತೆಗೆ ಅಗತ್ಯವಾಗಿದ್ದು, ಪ್ರಸಕ್ತ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾಗಿ ರುವ ತರಬೇತಿಗಳನ್ನು ನೀಡಲು ಕ್ರಮ ವಹಿಸುವಂತೆ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ತರಬೇತಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು.

ಪಿ.ಎಂ ಸ್ವನಿಧಿ ಯೋಜನೆ ಯಡಿ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಮಟ್ಟದ ಸಮಿತಿಯನ್ನು ಶೀಘ್ರ ರಚಿಸುವಂತೆ ತಿಳಿಸಿದರು.

ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ. ಶ್ರೀನಿವಾಸ ಪ್ರಾರಂಭದಲ್ಲಿ ಸ್ವಾಗತಿಸಿ, ಜಿಲ್ಲಾ ಕೌಶಲ್ಯ ಸಮಿತಿಯ ಉಪಸಮಿತಿಗಳ ವಿವರ ಹಾಗೂ ಜಿಲ್ಲಾ ಕೌಶಲ್ಯ ಸಮಿತಿಯಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಭೆಗೆ ತಿಳಿಸಿದರು.

ಸಭೆಯ ಕಾರ್ಯಸೂಚಿಯಂತೆ ಕೈಗಾರಿಕಾ ತರಬೇತಿ ಸಂಸ್ಥೆಗಳು ಹಾಗೂ ಜಿ.ಟಿ.ಟಿ.ಸಿ ಸಂಸ್ಥೆಗಳಲ್ಲಿ ನೀಡಲಾಗುತ್ತಿ ರುವ ಕೌಶಲ್ಯ ತರಬೇತಿ, ಮುಖ್ಯ ಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಯೋಜನೆಗಳು, ಯುವನಿಧಿ ಹಾಗೂ ಡೇ ನಲ್ಮ್ ಯೋಜನೆಗಳ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತಮ್ಮ ಇಲಾಖೆಯಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಕೈಗೊಳ್ಳಬಹುದಾದ ತರಬೇತಿಗಳ ಕುರಿತು ಮಾಹಿತಿ ನೀಡುವಂತೆ ವಿನಂತಿಸಿದರು.

ಜಿಲ್ಲಾ ಪಂಚಾಯತ್ನ ಉಪಕಾರ್ಯ ದರ್ಶಿ ರಮೇಶ್ ಮಾತನಾಡಿ, ಜಿಲ್ಲಾ ಪಂಚಾಯತ್ನಲ್ಲಿರುವ ಎನ್.ಆರ್.ಎಲ್.ಎಂ ಯೋಜನೆ ಹಾಗೂ ನಲ್ ಜಲ್ ಮಿತ್ರ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಅಂಬಿಕಾ, ಜಿಲ್ಲಾ ಕಾರ್ಮಿಕ ಅಧಿಕಾರಿ ವರಕ್ಷ್ಮಿ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಗೀತಮ್ಮ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಲತಾ, ಬೆಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳು, ಕೋಲಾರ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಕೋಲಾರ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಜಿ.ಟಿ.ಟಿ.ಸಿ ಸಂಸ್ಥೆಯ ಪ್ರಾಂಶುಪಾಲರು, ಉದ್ಯೋಗ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಚಿತ್ರ : ಕೋಲಾರ ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande