ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ : ಜಿ.ಡಿ ಕೃಷ್ಣಮೂರ್ತಿ
ಕೊಪ್ಪಳ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಿರಿಧಾನ್ಯಗಳನ್ನು ಬೆಳೆಯುವುದು ಹಾಗೂ ಅವುಗಳ ಖಾದ್ಯವನ್ನು ಸೇವಿಸುವುದು ಕಡಿಮೆಯಾಗುತ್ತಿದೆ. ಹಾಗಾಗಿ ಮುಂದಿನ ಪಿಳಿಗೆಯ ಮಕ್ಕಳಿಗೆ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ವಿಶೇಷತೆ ಕುರಿತು ತಿಳಿಸುವುದು ಹಾಗೂ ಜಾಗೃತಿ ಮೂಡಿಸುವುದು ಅವಶ್ಯವಾಗ
ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಸಿರಿಧಾನ್ಯ ಖಾದ್ಯಗಳ ಬಗ್ಗೆ ಮಕ್ಕಳಿಗೆ ತಿಳಿಸಿ - ಜಿ.ಡಿ ಕೃಷ್ಣಮೂರ್ತಿ


ಕೊಪ್ಪಳ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಿರಿಧಾನ್ಯಗಳನ್ನು ಬೆಳೆಯುವುದು ಹಾಗೂ ಅವುಗಳ ಖಾದ್ಯವನ್ನು ಸೇವಿಸುವುದು ಕಡಿಮೆಯಾಗುತ್ತಿದೆ. ಹಾಗಾಗಿ ಮುಂದಿನ ಪಿಳಿಗೆಯ ಮಕ್ಕಳಿಗೆ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ವಿಶೇಷತೆ ಕುರಿತು ತಿಳಿಸುವುದು ಹಾಗೂ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ ಹೇಳಿದರು.

ಅವರು ಗುರುವಾರ ಕೊಪ್ಪಳ ತಾಲ್ಲೂಕು ಪಂಚಾಯತ್ ಆವರಣದಲ್ಲಿರುವ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಐ.ಸಿ.ಎ.ಆರ್.ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಇವರ ಸಹಯೋಗದಲ್ಲಿ ಆಹಾರ ಮತ್ತು ಪೌಷ್ಟಿಕ ಯೋಜನೆಯಡಿ ನ್ಯೂಟ್ರಿ ಸಿರಿಧಾನ್ಯ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಬೆಳೆ ಉತ್ಪಾದನೆಯಾಚೆಗಿನ ಕೃಷಿ-ರೈತರ ಸಬಲೀಕರಣ ಎಂಬ ಪರಿಕಲ್ಪನೆಯೊಂದಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬದಲಾಗುತ್ತಿರುವ ನಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಸಣ್ಣ ವಯಸ್ಸಿನಲ್ಲೇ ರಕ್ತದೊತ್ತಡ, ಮಧುಮೇಹದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಆರೋಗ್ಯವೇ ಭಾಗ್ಯ ಎಂಬ ಮಾತನ್ನು ನಾವಿಂದು ಮರೆಯುತ್ತಿದ್ದೇವೆ. ಇದಕ್ಕೆ ಏಕೈಕ ಮತ್ತು ಶಾಶ್ವತ ಪರಿಹಾರ ನಮ್ಮ ಮಣ್ಣಿನ ಗುಣವನ್ನು ಹೊಂದಿರುವ ಮತ್ತು ಪೋಷಕಾಂಶಗಳ ಆಗರವಾಗಿರುವ ಸಿರಿಧಾನ್ಯಗಳ ಹೆಚ್ಚಿನ ಸಂಖ್ಯೆಯ ಬಳಕೆಯಲ್ಲಿದೆ ಎಂದರು.

ಸಿರಿಧಾನ್ಯ ವಿಶೇಷತೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ನಮ್ಮ ಹಿರಿಯರ ಆರೋಗ್ಯದ ಗುಟ್ಟನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಅಗತ್ಯವಾಗಿದೆ. ಇಂದಿನ ಮಕ್ಕಳು ಮತ್ತು ಯುವಕರು ಹಳೆಯ ಶೈಲಿಯ ಅಡುಗೆಗಳನ್ನು ಇಷ್ಟಪಡದಿರಬಹುದು. ಹಾಗಾಗಿ ಅವರ ರುಚಿಗೆ ತಕ್ಕಂತೆ ಸಿರಿಧಾನ್ಯಗಳನ್ನು ಬಳಸಿ ಬಿಸ್ಕತ್ತು ಮತ್ತು ಕೇಕ್ ನಂತಹ ಇಷ್ಟವಾಗುವ ರೂಪದಲ್ಲಿ ಪೌಷ್ಟಿಕ ಆಹಾರ ನೀಡುವ ಮೂಲಕ, ಮುಂದಿನ ಪೀಳಿಗೆಯ ಆರೋಗ್ಯವನ್ನು ಹೆಚ್ಚಿಸುವ ಉದ್ದೇಶದಿಂದಲೂ ಸಹ ನಮ್ಮ ಜಿಲ್ಲೆಯಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಗಮನ ಸೆಳೆದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪ್ರದರ್ಶನ : ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಹಿಳೆಯರು ಮತ್ತು ಸುಮಾರು 25ಕ್ಕೂ ಹೆಚ್ಚು ಮಹಿಳಾ ತಂಡಗಳು ಇದರಲ್ಲಿ ಭಾಗವಹಿಸಿದ್ದವು. ನವಣಿ, ಸಜ್ಜಿ, ಹಾರಕ ಬರಗು, ರಾಗಿ, ಸಾಮೆ, ಅಗಸಿ, ಮುಂತಾದ ಧಾನ್ಯಗಳಿಂದ ತಯಾರಿಸಿದ ವಿವಿಧ ತರಹದ ಖಾದ್ಯಗಳನ್ನು ಸ್ಪರ್ಧೆಯಲ್ಲಿ ಪ್ರದರ್ಶಿಸಿದರು. ರಾಗಿಯಿಂದ ತಯಾರಿಸಿದ ಕೇಕ್, ಹಲವಾ, ಪೇಡಾ, ಲಾಡು ಮತ್ತು ಬಿಸ್ಕತ್ತು, ಸಜ್ಜೆ ಪೇಡಾ, ಆಳ್ವಿ ಪಾಯಿಸಾ, ಜೋಳದ ಹಿಟ್ಟಿನ ಖಾರದ ಒಗ್ಗರಣೆ ಮುದ್ದೆ, ಜೋಳದ ಸಮೋಸಾ, ನೆವಣೆ ನಿಪ್ಪಟ್ಟು, ಬ್ರಾಂಹ್ಮಿ ತಂಬುಳಿ ಸೇರಿದಂತೆ ಇತರೆ ಪದಾರ್ಥಗಳು ಎಲ್ಲರ ಗಮನ ಸೆಳೆದವು.

ವಿಜೇತರಿಗೆ ಬಹುಮಾನ : ಪಾಕ ಸ್ಪರ್ಧೆಯಲ್ಲಿ ಸಿರಿಧಾನ್ಯ ಖಾದ್ಯ, ಮರೆತು ಹೋದ ಖಾದ್ಯ ಮತ್ತು ಸಿಹಿ ಖಾದ್ಯ ಈ ಮೂರು ವಿಭಾಗದಲ್ಲಿ ಮೂರು ತಂಡಗಳನ್ನು ವಿಜೇತರನ್ನಾಗಿ ಘೋಷಿಸಿ, ಪ್ರತಿ ವಿಭಾಗದಲ್ಲಿನ ವಿಜೇತರಿಗೆ ಪ್ರಥಮ ಬಹುಮಾನ 5 ಸಾವಿರ, ದ್ವಿತೀಯ 3 ಸಾವಿರ, ತೃತೀಯ 2 ಸಾವಿರ ರೂ.ಗಳ ಬಹುಮಾನವನ್ನು ನೀಡಲಾಗುವುದು ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಎಲ್.ಸಿದ್ದೇಶ್ವರ, ಸಹಾಯಕ ಕೃಷಿ ನಿರ್ದೆಶಕರಾದ ಜೀವನ ಸಾಬ್ ಹಾಗೂ ಶಶಿಕಲಾ ಸವಣೂರು, ಕೃಷಿ ವಿಸ್ತೀರ್ಣ ಶಿಕ್ಷಣ ಕೇಂದ್ರದ ಮುಖ್ಯಸ್ಥರಾದ ಡಾ. ಎಂ.ವಿ ರವಿ, ಎ.ಇ.ಸಿ. ವಾಮನ್ ಮೂರ್ತಿ, ಕೃಷಿ ಅಧಿಕಾರಿ ಪ್ರಕಾಶ ಚವಡಿ ಸೇರಿದಂತೆ ಯೋಗೆಶ, ಮುತ್ತಣ್ಣ, ಸ್ಮೀತಾ, ಡಾ. ಕವಿತ ಉಳಿಕಾಶಿ, ಡಾ. ರಾಧಾ ಹಾಗೂ ಡಾ. ರೇವತಿ ಹಾಗೂ ಕೃಷಿ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು ಸ್ಪರ್ಧಾ ತಂಡಗಳ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande