
ಬೆಂಗಳೂರು, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಎಸ್ ಲಾಡ್ ಅವರು ಮಂಡಳಿಯ 46ನೇ ಸಭೆ ನಡೆಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸಿನ್, ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಆದಿತ್ಯ ಬಿಸ್ವಾಸ್, ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಡಿ. ಭಾರತಿ, ಮಂಡಳಿಯ ಜಂಟಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಮಿಕ ಆಯುಕ್ತರಾದ ಉಮೇಶ್, ಮಂಡಳಿಯ ಸದಸ್ಯಋಾದ ವಿಜಯ ಕುಮಾರ್ ಪಾಟೀಲ್, ಜಾನಿ, ಹೆಚ್.ಜೆ.ರಮೇಶ್, ವಿಜಯಲಕ್ಷ್ಮಿ, ಶ್ರೇಯಾನ್ಸ್ ಜೈನ್, ಬಸಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa