
ಹಿಂದೂಪುರ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾಚಿಗುಡ–ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಿಂದೂಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡುವ ಕಾರ್ಯಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ವಿಶೇಷ ಸಂದರ್ಭದಲ್ಲಿ ಹಿಂದೂಪುರ ಸಂಸದ ಪಾರ್ಥಸಾರಥಿ, ಹಿಂದೂಪುರ ಮುನ್ಸಿಪಾಲಿಟಿ ಅಧ್ಯಕ್ಷ ಡಿ.ಇ. ರಮೇಶ್, ವಿಧಾನಪರಿಷತ್ ಸದಸ್ಯ ತಿಪ್ಪರಸ್ವಾಮಿ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಪುರದಲ್ಲಿ ಹೆಚ್ಚುವರಿ ನಿಲುಗಡೆ ದೊರೆತಿರುವುದರಿಂದ ಈ ಪ್ರದೇಶದ ಪ್ರಯಾಣಿಕರಿಗೆ ಬೆಂಗಳೂರು ಹಾಗೂ ತೆಲಂಗಾಣದ ನಡುವೆ ಸಂಚಾರ ಸುಗಮವಾಗಲಿದೆ. ಅಲ್ಲದೆ ವ್ಯಾಪಾರ, ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಪ್ರಯಾಣಿಸುವ ಜನರಿಗೆ ಮಹತ್ತರ ಅನುಕೂಲ ಒದಗಲಿದೆ ಎಂದು ಸಚಿವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa