ಕೋಲಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ೧೪೧ ನೇ ವರ್ಷದ ಸಂಸ್ಥಾಪನಾ ದಿನಾಚರಣೆ
ಕೋಲಾರ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ೧೪೧ ನೇ ವರ್ಷದ ಸಂಸ್ಥಾಪನಾ ದಿನಾಚರಣೆ
ಕೋಲಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದರು.


ಕೋಲಾರ, ೨೮ ಡಿಸೆಂಬರ್ (ಹಿ.ಸ) :

ಆ್ಯಂಕರ್ : ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗ ೧೪೧ನೇ ವರ್ಷದ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಶಾಸಕ ಕೊತ್ತೂರು ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು

ಆನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ರಚನೆಗೊಂಡು ೧೪೧ ವರ್ಷಗಳಾಗಿದ್ದು, ಕಾಂಗ್ರೆಸ್ಸಿಗರಾದ ನಮಗೆ ಹೆಮ್ಮೆಯ ವಿಚಾರವಾಗಿದೆ. ಬ್ರಿಟಿಷರ ವಿರುದ್ಧ ಹೋರಾಡಿ ಭಾರತ ದೇಶಕ್ಕೆ ಸ್ವಾತಂತ್ರö್ಯ ತಂದುಕೊಡುವಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದೆ. ಸ್ವಾತಂತ್ರö್ಯದ ಬಳಿಕವೂ ಆಧುನಿಕ ಭಾರತವನ್ನು ಕಟ್ಟುವಲ್ಲಿ ಸಾಕಷ್ಟು ಶ್ರಮ ವಹಿಸಿದೆ ಇವತ್ತಿನ ಟಿವಿ, ಇಂಟರ್ನೆಟ್, ಕಾರು, ಸೇರಿದಂತೆ ಪ್ರತಿಷ್ಠಿತ ಕಂಪನಿಗಳನ್ನು ಕೊಡುಗೆಯಾಗಿ ನೀಡಿ ಉದ್ಯೋಗವನ್ನು ನೀಡಿದ್ದಾರೆ ಇವು ಎಲ್ಲವೂ ಮುಂದಿನ ಪೀಳಿಗೆಗೆ ದಾರಿ ಮಾಡಿಕೊಟ್ಟಿದ್ದಾರೆ ಎಂದರು.

ಭಾರತ ದೇಶವನ್ನು ಜಾತ್ಯಾತೀತ, ಪ್ರಗತಿಪರ ರಾಷ್ಟ್ರವನ್ನಾಗಿ ಮಾಡುವಲ್ಲಿ ಸುದೀರ್ಘ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದ ರಕ್ಷಣೆಯೊಂದಿಗೆ, ದೀನದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ, ಬಡವರ ಏಳಿಗೆಗಾಗಿ ಶ್ರಮಿಸಿದೆ ಕೋಲಾರ ಜಿಲ್ಲೆಯು ಕಾಂಗ್ರೆಸ್ ಪಕ್ಷದ ಭಧ್ರಕೋಟೆಯಾಗಿದೆ ಇಲ್ಲಿ ಸಿಲ್ಕ್, ಮಿಲ್ಕ್, ಚಿನ್ನಕ್ಕೆ ಹೆಸರುವಾಸಿಯಾಗಿದೆ ಕಾಂಗ್ರೆಸ್ ಪಕ್ಷವನ್ನು ಯಾರು ಕಟ್ಟಬೇಕಾಗಿಲ್ಲ ಯಾರು ಉಳಿಸಬೇಕಾಗಿಲ್ಲ ನಾವು ಕಾಂಗ್ರೆಸ್ ನಂಬಿದರೆ ಸಾಕು ಅದೇ ನಮ್ಮನ್ನು ಉಳಿಸುತ್ತದೆ ಅದಕ್ಕೆ ಗೌರವ ಘನತೆ ತರುವ ಕೆಲಸ ಮಾಡಿ ಮುಂದಿನ ತಾಪಂ ಜಿಪಂ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋಗೋಣ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಯಾರು ಇದ್ದಾರೆ ಅವರು ಎಲ್ಲರೂ ನಾಯಕರೆ ಇಲ್ಲಿ ಯಾರು ಸಾಮಾನ್ಯರು ಅಲ್ಲ ಹಿಂದೆ ಬಜೆಟ್ ನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಅನುದಾನ ಬಿಡುಗಡೆ ಮಾಡಲಾಯಿತು ಕೆಲವು ಆರೋಪಗಳು ಬಂದ ಹಿನ್ನಲೆಯಲ್ಲಿ ಸರ್ಕಾರವೇ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಲಾಗುತ್ತದೆ ಜೊತೆಗೆ ರಿಂಗ್ ರೋಡ್ ನಿರ್ಮಾಣಕ್ಕೆ ೨.೮೫ ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಎರಡುವರೆ ವರ್ಷಗಳಲ್ಲಿ ಸುಮಾರು ೧೫೦೦ ಕೋಟಿ ಅನುದಾನ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಂದಿದೆ ಆದರೂ ವಿರೋಧಿಗಳ ಟೀಕೆಗೆ ಉತ್ತರ ಕೊಡಲು ದಾಖಲೆಗಳು ಸಮೇತ ನೀಡಲು ಸಿದ್ದ ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್, ಸೇರಿದಂತೆ ಜನಪ್ರತಿನಿಧಿಗಳ ಬೆಂಬಲವಿದೆ ಎಂದು ವಿವರಿಸಿದರು

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತವಾಗಿ ಕಾಂಗ್ರೆಸ್ ಹಿರಿಯ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೆಂಕಟಪತಿಯಪ್ಪ, ಖಯ್ಯಾಮ್ ಅವರನ್ನು ಸನ್ಮಾನಿಸಲಾಯಿತು

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಮುಲ್ ನಿರ್ದೇಶಕ ಷಂಷೀರ್, ಎಸ್ಸಿ ಘಟಕ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ಅಂಬರೀಷ್, ಸೇವಾದಳದ ಅಧ್ಯಕ್ಷ ಹರಿಕುಮಾರ್, ಮುಖಂಡರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಖಾದ್ರಿಪುರ ಬಾಬು, ವೀರೇಂದ್ರ ಪಾಟೀಲ್,ಚಂದ್ರಮೌಳಿ ರಾಜಕುಮಾರ್, ನದೀಂ ನಾರಾಯಣಸ್ವಾಮಿ ಭಾಗವಹಿಸಿದ್ದರು.

ಚಿತ್ರ : ಕೋಲಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande