ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿ
ಕೊಪ್ಪಳ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿ


ಕೊಪ್ಪಳ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನಿಸಲಾಗಿದೆ.

ಪ್ರವಾಸೋದ್ಯಮ, ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಮತ್ತು ಪರಿಶಿಷ್ಟ ಪಂಗಡದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ವಿಷಯದ ಬಗ್ಗೆ ಹಾಗೂ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ರವರ ಮೂಲಕ ವಸತಿ ರಹಿತ ಕಾರ್ಯಕ್ರಮವನ್ನ ಜಾರಿಗೂಳಿಸಲು ಉದ್ದೇಶಿಸಲಾಗಿರುತ್ತದೆ.

ನಾಲ್ಕು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು. ತರಬೇತಿಗಾಗಿ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. 10ನೇ ತರಗತಿ ಉತ್ತೀರ್ಣರಾದವರಿಗೆ ಫುಡ್ & ಬೆವರೇಜ ಸರ್ವಿಸ್ ಸ್ಟಿವರ್ಡ್ ತರಬೇತಿ, 8ನೇ ತರಗತಿ ಉತ್ತೀರ್ಣರಾದವರಿಗೆ ಮಲ್ಟಿ ಕುಸನ್ ಕುಕ್ ತರಬೇತಿ ಹಾಗೂ 5ನೇ ತರಗತಿ ಉತ್ತೀರ್ಣರಾದವರಿಗೆ ರೂಂ ಅಟೆಂಡೆ0ಟ್ ತರಬೇತಿ ನೀಡಲಾಗುವುದು.

ಆಸಕ್ತರು ಕಛೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿಂದ ಅರ್ಜಿಯನ್ನು ಉಚಿತವಾಗಿ ಪಡೆದು ಜನವರಿ 18 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ: 08539-225566 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande