

ಕೊಪ್ಪಳ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕೊಪ್ಪಳ ವಿ.ವಿ. ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕುವೆಂಪು ಅವರು, ಸೇರಿದಂತೆ ಅನೇಕ ಹಿರಿಯ ಸಾಹಿತಿಗಳೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದರಲ್ಲದೆ, ಅವರ ಸಾಹಿತ್ಯದ ಮಹತ್ವ, ಕುವೆಂಪು ಅವರ ರಾಮಾಯಣ ದರ್ಶನಂ ಕೃತಿ, ಅವರು ಹಳೆಗನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ, ಅವರ ವಿಶ್ವ ಮಾನವ ಸಂದೇಶವನ್ನು ನೆನೆದರು. ವಿದ್ಯಾರ್ಥಿಗಳು ಅವರ ಸಾಹಿತ್ಯವನ್ನು ಅಧ್ಯಯನ ಮಾಡಿದರೆ ಒಳ್ಳೆಯ ಭವಿಷ್ಯವಿದೆ ಎಂದರು.
ಇದೇ ವೇಳೆ ಮಾತನಾಡಿದ ಇನ್ನೋರ್ವ ಮುಖ್ಯ ಅತಿಥಿಗಳಾದ ಕುಲಸಚಿವರಾದ ಪ್ರೊ.ಎಸ್ವಿ.ಡಾಣಿಯವರು ಕುವೆಂಪುರವರು ಹೇಳಿದ ಮತಗಳು ಮನುಜ ಪಥಗಳಾಗಬೇಕೆಂಬ ಮಾತುಗಳು ಸೇರಿದಂತೆ, ಅವರ ವಿಶ್ವ ಮಾನವ ಸಂದೇಶವನ್ನು ಸಕಲರು ಪಸರಿಸಬೇಕೆಂದರು.
ವಿ.ವಿ. ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಶ್ರದ್ಧಾ ಭಕ್ತಿಗಳಿಂದ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ವಿ.ವಿ.ಯ ಸಕಲ ಬೋಧಕ, ಬೋಧಕೇತರ ಸಿಬ್ಬಂಧಿ ಈ ವೇಳೆ ಉಪಸ್ಥಿತರಿದ್ದರು.
ಆರಂಭದಲ್ಲಿ ಪ್ರದರ್ಶನ ಕಲೆ ವಿಭಾಗದ ಉಪನ್ಯಾಸಕರಾದ ಅನಂತಕುಮಾರ ದೊರೆ, ಶಂಕರ ಮೇಟಿ ಹಾಗೂ ತಂಡದವರು ಕುವೆಂಪುರವರ ಭಾವಗೀತೆಗಳನ್ನು ಹಾಡಿದರು.
ಪ್ರಾದ್ಯಾಪಕರಾದ ಡಾ. ವೀರೇಶ ಉತ್ತಂಗಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಡಾ ಬಸವರಾಜ ಗಡಾದ ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್