ಡಾ. ಜಿ. ಪರಮೇಶ್ವರ್ ರನ್ನು ಮುಖ್ಯಮಂತ್ರಿ ಮಾಡಲಿ : ಚಲವಾದಿ ಮಹಾಸಭಾ ಆಗ್ರಹ
ಬಳ್ಳಾರಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುವುದಾದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು `ಮುಖ್ಯಮಂತ್ರಿ ಮಾಡಲಿ'' ಎಂದು ಚಲವಾದಿ ಮಹಾಸಭಾ ಆಗ್ರಹಿಸಿದೆ. ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶಿವಕುಮಾರ
ಡಾ. ಜಿ. ಪರಮೇಶ್ವರ್ ಅವರನ್ನು ಸಿಎಂ ಮಾಡಲಿ : ಚಲವಾದಿ ಮಹಾಸಭಾ ಆಗ್ರಹ


ಬಳ್ಳಾರಿ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುವುದಾದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು `ಮುಖ್ಯಮಂತ್ರಿ ಮಾಡಲಿ' ಎಂದು ಚಲವಾದಿ ಮಹಾಸಭಾ ಆಗ್ರಹಿಸಿದೆ.

ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಅವರು ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಡಾ. ಜಿ. ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಸುದೀರ್ಘ ಅವಧಿಯ ಅನುಭವ, ವಿವಾದಾತೀತ ಮುಖಂಡರಾಗಿರುವ ಡಾ. ಜಿ. ಪರಮೇಶ್ವರ್ ಅವರು ಮೊದಲ ದಲಿತ ಮುಖ್ಯಮಂತ್ರಿ ಆಗಲಿ ಎಂದು ಹೇಳಿದರು.

ಚಲವಾದಿ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷರಾದ ಮಾನಯ್ಯ ಬಿ. ಗೋನಾಳ್, ಮುಖಂಡರಾದ ಶಂಕರ್ ನಂದಿಹಾಳ್, ಹನುಮೇಶ್ ಕಟ್ಟಿಮನಿ, ಟಿ ಶೇಷಪ್ಪ, ಮಲ್ಲಿಕಾರ್ಜುನ, ಮಧುರಾಜ್ ಬಿ.ಗೋನಾಳ್ ಸೇರಿ ಇತರರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande