ಬೆಂಗಳೂರು ವಿಶ್ವ ಆರೋಗ್ಯ ಕೇಂದ್ರ : ಶರಣ ಪ್ರಕಾಶ ಪಾಟೀಲ
ಬೆಂಗಳೂರು, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕದ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕ
Health center


ಬೆಂಗಳೂರು, 12 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕದ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕ್ವಿನ್ ಸಿಟಿ ಹಾಗೂ ಆರೋಗ್ಯ ರಕ್ಷಣೆ ಕ್ಷೇತ್ರದ ಚರ್ಚಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬೆಂಗಳೂರಿನ ಸಮೀಪದಲ್ಲಿ 5,800 ಎಕರೆಗಳಲ್ಲಿ ಮೈದಳೆಯುತ್ತಿರುವ ಕ್ವಿನ್ ಸಿಟಿ, ವೈದ್ಯಕೀಯ ಕ್ಷೇತ್ರದ ನಾವೀನ್ಯತೆಯ ಕೇಂದ್ರವಾಗಿ ಹೊರಹೊಮ್ಮಲಿದೆ. ಔಷಧಗಳು, ರೋಗನಿರ್ಣಯಗಳು ಮತ್ತು ವೈದ್ಯಕೀಯ ತಂತ್ರಜ್ಞಾನಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹೂಡಿಕೆಯನ್ನು ಆಕರ್ಷಿಸಲಿದೆ. ಇದರಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ಕ್ವಿನ್ ಸಿಟಿ ವಿಶ್ವ ದರ್ಜೆಯ ಆರೋಗ್ಯ ಸೇವೆಯನ್ನು ಅಭಿವೃದ್ಧಿಪಡಿಸಲು ಒಂದು ಅನನ್ಯ ಅವಕಾಶವನ್ನು ಒದಗಿಸುತ್ತದೆ. ಬೆಂಗಳೂರಿನಿಂದ 50 ಕಿಲೋ ಮೀಟರ್ ದೂರದಲ್ಲಿ ಇದು ತಲೆ ಎತ್ತಲಿದೆ. ಇಲ್ಲಿ ಬಯೋಟೆಕ್/ಫಾರ್ಮಾ, ಪ್ರಮಖ ಆಸ್ಪತ್ರೆಗಳು, ಉದ್ದಿಮೆಗಳು ಸ್ಥಾಪನೆಯಾಗುವುದರಿಂದ ಆರ್ಥಿಕತೆ ಇನ್ನಷ್ಟು ಚೇತರಿಕೆಯಾಗುತ್ತದೆ. ಜನರಿಗೆ ವಿಶೇಷ ಸೌಲಭ್ಯಗಳು ದೊರೆಯುತ್ತವೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ವಿವರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande