ನವದೆಹಲಿ, 12 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಸಹಕಾರಿ ಸಂಘಗಳ ಮೂಲಕ ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣ ಪ್ರದೇಶಗಳ ಸಮೃದ್ಧಿ ಸಾಧ್ಯ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ದೇಶದ ರೈತರು ಮತ್ತು ಗ್ರಾಮೀಣ ಪ್ರದೇಶಗಳ ಹಿತದೃಷ್ಟಿಯಿಂದ ಸಹಕಾರ ಸಚಿವಾಲಯವನ್ನು ರಚಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರದ ಮೂಲಕ ಸಮೃದ್ಧಿಯ ಮಂತ್ರವನ್ನು ನೀಡಿದ್ದಾರೆ ಎಂದು ಹೇಳಿದರು.
'ಸಹಕಾರಿ ಸಂಸ್ಥೆಗಳನ್ನು ಬಲಪಡಿಸಲು ತೆಗೆದುಕೊಂಡ ಮತ್ತು ನಡೆಯುತ್ತಿರುವ ಉಪಕ್ರಮಗಳು' ಎಂಬ ವಿಷಯದ ಕುರಿತು ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಕೇಂದ್ರ ಸಹಕಾರ ರಾಜ್ಯ ಸಚಿವರಾದ ಕೃಷ್ಣಪಾಲ್ ಮತ್ತು ಮುರಳೀಧರ್ ಮೊಹೋಲ್, ಸಮಿತಿಯ ಸದಸ್ಯರು, ಕೇಂದ್ರ ಸಹಕಾರ ಕಾರ್ಯದರ್ಶಿ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa