ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಆದ್ಯತೆ ಮೇರೆಗೆ ಪರಿಹರಿಸಲು ಜಿಲ್ಲಾಧಿಕಾರಿ ಸೂಚನೆ
ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಆದ್ಯತೆ ಮೇರೆಗೆ ಪರಿಹರಿಸಲು ಜಿಲ್ಲಾಧಿಕಾರಿ ಸೂಚನೆ
ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಆದ್ಯತೆ  ಮೇರೆಗೆ ಪರಿಹರಿಸಲು ಜಿಲ್ಲಾಧಿಕಾರಿ ಸೂಚನೆ


ಕೋಲಾರ, ೧೧ ನವೆಂಬರ್ (ಹಿ.ಸ.) :

ಆ್ಯಂಕರ್ : ಕುಡಿಯುವ ನೀರಿನ ಸಮಸ್ಯೆ ಯನ್ನು ಆದ್ಯತೆ ಮೇರೆಗೆ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಯರಗೊಳ ಹಾಗೂ ಕೆಸಿವ್ಯಾಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೋಲಾರ ನಗರ ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿರುವ ಯರಗೊಳ ಯೋಜನೆಯಡಿ ಈವರೆಗೆ ಮಧ್ಯರಾತ್ರಿಯವರೆಗೆ ಪಂಪಿಂಗ್ ಮಾಡಲಾಗುತ್ತಿತ್ತು. ಆದರೆ ಇಂದಿನಿಂದ ಸತತವಾಗಿ ಪಂಪಿಂಗ್ ಮಾಡಲು ಉದ್ದೇಶಿಸಲಾಗಿದೆ. ಪ್ರಸ್ತುತ ಬೇಸಿಗೆ ಆರಂಭವಾಗಿರುವುದರಿಂದ ಕುಡಿಯುವ ನೀರಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಕುಡಿಯುವ ನೀರನ್ನು ಪೂರೈಸಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಈವರೆಗೆ ೮ ರಿಂದ ೧೨ ಗಂಟೆಗಳ ಕಾಲ ನೀರು ಪಂಪಿಂಗ್ ಮಾಡಲಾಗುತ್ತಿತ್ತು. ಇಂದಿನಿಂದ ೧೪ ರಿಂದ ೧೮ ಗಂಟೆಗಳ ಕಾಲ ಪಂಪಿಂಗ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಪಂಪಿಂಗ್ ಮಾಡಲಾದ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಕೋಲಾರ ನಗರದಲ್ಲಿ ೧೧ ಒವರ್ಹೆಡ್ ಟ್ಯಾಂಕ್ಗಳಿಂದ ೧೭ ವಾರ್ಡ್ಗಳಿಗೆ ೪ ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನು ಮುಂದೆ ಪ್ರತಿ ೨ ದಿನಗಳಿಗೊಮ್ಮೆ ೨ ಗಂಟೆಗಳಂತೆ ಕುಡಿಯುವ ನೀರನ್ನು ಸರಬರಾಜು ಮಾಡಲು ಅವರು ಸೂಚಿಸಿದರು.

೧೩ ವಾಡ್ಗಳಲ್ಲಿ ಯರಗೊಳ ಜಲಾಶಯದ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ೯ ವಾರ್ಡ್ಗಳಲ್ಲಿ ಯರಗೊಳ ಹಾಗೂ ಕೊಳವೆ ಬಾವಿಗಳ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಪ್ರತಿನಿತ್ಯ ೩೫ ಟ್ರಿಪ್ಗಳಲ್ಲಿ ೭ ಟ್ಯಾಂಕರ್ಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಟ್ಯಾಂಕರ್ಗಳ ಬೇಡಿಕೆ ಹೆಚ್ಚಾಗಿರುವುದರಿಂದ ಹೆಚ್ಚುವರಿಯಾಗಿ ೪ ಹೊಸ ಟ್ಯಾಂಕರ್ಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಪೌರಾಯುಕ್ತರಾದ ಪ್ರಸಾದ್ ಅವರು ತಿಳಿಸಿದರು.

ಉಳಿದ ವಾರ್ಡ್ಗಳಿಗೆ ನಗರಸಭೆ ವ್ಯಾಪ್ತಿಯ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ. ಜೊತೆಗೆ ನೀರಿನ ಮಿತ ಬಳಕೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಗರಸಭೆಯ ಕಸ ಸಂಗ್ರಹಣೆ ವಾಹನಗಳಲ್ಲಿ ಶುಚಿತ್ವದ ಜೊತೆಗೆ ನೀರಿನ ಮಿತ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಮಾಲೂರಿನ ೨೭ವಾರ್ಡ್ಗಳಲ್ಲಿ ೫ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ೧೫ವಾರ್ಡ್ಗಳಲ್ಲಿ ಟ್ಯಾಂಕರ್ ಹಾಗೂ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಐದು ದಿನಗಳ ಬದಲಿಗೆ ಪ್ರತಿ ೩ ಅಥವಾ ೨ದಿನಗಳಿಗೊಮ್ಮೆ ನೀರು ಒದಗಿಸುವ ಯೋಜನೆಯನ್ನು ರೂಪಿಸಬೇಕೆಂದು ತಿಳಿಸಿದರು.

ಕೆಸಿವ್ಯಾಲಿ ಯೋಜನೆಯ ನೀರು ೪ ಎಸ್.ಟಿ.ಪಿಗಳಲ್ಲಿ ೪೦೦ ಎಂ.ಎಲ್.ಡಿ ನೀರು ಸಂಗ್ರಹಣ ಸಾಮರ್ಥ್ಯವಿದ್ದು, ಪ್ರಸಕ್ತ ಸಾಲಿನಲ್ಲಿ ೨೭೬ ಕೆರೆಗಳನ್ನು ತುಂಬಲು ಯೋಜಿಸಲಾಗುತ್ತಿದೆ. ಒಟ್ಟಾರೆ ೫೦೦ ಕೆರೆಗಳಲ್ಲಿ ೪೧೫ ಕೆರೆಗಳನ್ನು ೯ ಪಂಪಿಂಗ್ ಸ್ಟೇಷನ್ಸ್ ಮೂಲಕ ಹಾಗೂ ಪ್ರಾಕೃತಿಕ ರಿಡ್ಜ್ಗಳನ್ನು ಬಳಸಿ ತುಂಬಲಾಗುತ್ತಿದೆ ಎಂದರು.

ಸಭೆಯಲ್ಲಿ ಬೇತಮಂಗಲ ಕಾರ್ಯಪಾಲಕ ಇಂಜನಿಯರ್ , ಯೋಜನಾ ನಿರ್ದೇಶಕಿ ಅಂಬಿಕಾ, ಬೆಸ್ಕಾಂ ಕಾರ್ಯಪಾಲಕ ಅಭಿಯಂತರರು ಶೋಭ, ಕೋಲಾರ ನಗರಸಭೆ ಆಯುಕ್ತರಾದ ಪ್ರಸಾದ್, ಮಾಲೂರು ಹಾಗೂ ಬಂಗಾರಪೇಟೆ ಪೌರಾಯುಕ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಯರಗೊಳ ಹಾಗೂ ಕೆಸಿವ್ಯಾಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ರವಿ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande