ರಾಯಚೂರು, 12 ಮಾರ್ಚ್ (ಹಿ.ಸ.):
ಆ್ಯಂಕರ್ : ಸದರ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿ ಗಿರೀಶ್ (41) ತಂದೆ ಗಂಗಾಧರ್ ಸುತ್ರಾವೆ ಫೆ. 21ರ ಬೆಳಿಗ್ಗೆ 10ಗಂಟೆಗೆ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಸದರ್ ಬಜಾರ್ ಪೊಲೀಸ ಠಾಣೆಯಲ್ಲಿ ಗುನ್ನೆ ನಂ;20/2025 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ವ್ಯಕ್ತಿಯ ಬಗೆ ಸುಳಿವು ಸಿಕ್ಕಲ್ಲಿ ರಾಯಚೂರಿನ ಸದರ್ ಬಜಾರ್ ಪೊಲೀಸ ಠಾಣೆಯ ದೂರವಾಣಿ ಸಂಖ್ಯೆ: 08532-226148, ಪಿಎಸ್ಐ; 9480803830ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್