ಹುಬ್ಬಳ್ಳಿ, 13 ಮಾರ್ಚ್ (ಹಿ.ಸ.) :
ಆ್ಯಂಕರ್ : ಬೂದು ಕುಂಬಳಕಾಯಿ ಅನೇಕ ಔಷಧೀಯ ಗುಣಗಳಿಂದ ತುಂಬಿರುವ ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಇದನ್ನು ಆಯುರ್ವೇದದಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ.
ಬೂದು ಕುಂಬಳಕಾಯಿ ರಸವು ಪೋಷಕಾಂಶಗಳಿಂದ ತುಂಬಿದೆ. ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಫರಸ್, ಸತು, ಮೆಗ್ನೀಸಿಯಮ್, ತಾಮ್ರ ಮತ್ತು ಖನಿಜಗಳನ್ನು ಹೊಂದಿದೆ ಹಾಗೂ ನಿಯಾಸಿನ್, ಥಯಾಮಿನ್, ವಿಟಮಿನ್ ಸಿ ಮತ್ತು ರೈಬೋಫ್ಲಾವಿನ್ನಂತಹ ವಿಟಮಿನ್ಗಳ ಮೂಲವಾಗಿದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದರ ರಸ ಸೇವನೆ ಮಾಡುವುದು ಸೂಕ್ತ . ದಿನನಿತ್ಯ ಇದರ ಜ್ಯೂಸ್ ಸೇವನೆ ಮಾಡುವುದರಿಂದ ಸಿಗುವ ಪ್ರಯೋನಗಳ ಮಾಹಿತಿ ಇಲ್ಲಿದೆ...
ಬೂದು ಕುಂಬಳಕಾಯಿ ರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ರೋಗಗಳಿಂದ ದೂರವಿರಬಹುದು. ಜೊತೆಗೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಅದಲ್ಲದೆ ಪ್ರತಿದಿನ ಈ ರಸವನ್ನು ಸೇವಿಸುವುದರಿಂದ ನಿರ್ಜಲೀಕರಣ ಉಂಟಾಗುವುದಿಲ್ಲ.
ಕುಂಬಳಕಾಯಿ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಕುಂಬಳಕಾಯಿಯಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಇದರಲ್ಲಿರುವ ನಾರಿನಂಶ ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ ಬೂದು ಕುಂಬಳಕಾಯಿ ರಸವು ಉತ್ತಮ ಆಯ್ಕೆಯಾಗಿದೆ. ನೀವು ಈ ರಸವನ್ನು ನಿಯಮಿತವಾಗಿ ತೆಗೆದುಕೊಂಡರೆ, ನಿದ್ರಾಹೀನತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa