ಬೆಂಗಳೂರು, 14 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಪ್ರತಿ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದ ಅವರು,
ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa